MLC ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ – ಸೋತರು ಜಗದೀಶ್ ಶೆಟ್ಟರ್ ರನ್ನು ಕೈಬಿಡದ ಹೈ ಕಮಾಂಡ್…..

Suddi Sante Desk
MLC ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ – ಸೋತರು ಜಗದೀಶ್ ಶೆಟ್ಟರ್ ರನ್ನು ಕೈಬಿಡದ ಹೈ ಕಮಾಂಡ್…..

ಬೆಂಗಳೂರು

ಕಳೆದ ಬಾರಿಯ ವಿಧಾನಸಭಾ ಚುನಾವಣೆ ಯಲ್ಲಿ ಸೋತಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧೆ ಮಾಡಲು ಅವಕಾಶವನ್ನು ನೀಡಲಾಗಿದೆ

ಹೌದು ಚುನಾವಣೆ ಯ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಇವರನ್ನು ಈಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪೈನಲ್ ಮಾಡಲಾಗಿದೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ ದಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಈ ಚುನಾವಣೆ ಯಲ್ಲಿ ಪರಾಭವಗೊಂಡರೂ ಸಹ ಜೂನ್ 30 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದು ಕೊಂಡಿದ್ದಾರೆ.

ಜೂನ್ 30ರಂದು ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್ ಎಸ್ ಬೋಸರಾಜು ಅವಕಾಶ ಪಡೆದುಕೊಂಡಿದ್ದಾರೆ.ಸಂಖ್ಯಾಬಲದ ಆಧಾರ ದಲ್ಲಿ ಈ ಮೂರೂ ಸ್ಥಾನಗಳನ್ನು ಕಾಂಗ್ರೆಸ್ ನಿರಾಯಸವಾಗಿ ಪಡೆದುಕೊಳ್ಳಲಿದೆ.

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ಕಲ್ಪಿಸಿಕೊ ಡುವ ಮೂಲಕ ಕಾಂಗ್ರೆಸ್ ಈಗಿನಿಂದಲೇ ಚುನಾವಣೆಗೆ ತಯಾರಿ ನಡೆಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು….

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.