ರಾಹುಲ್ ಗಾಂಧಿ ಅವರ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನು ಸ್ವಾಗತಿಸಿದ ಜಗದೀಶ್ ಶೆಟ್ಟರ್…..

Suddi Sante Desk
ರಾಹುಲ್ ಗಾಂಧಿ ಅವರ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನು ಸ್ವಾಗತಿಸಿದ ಜಗದೀಶ್ ಶೆಟ್ಟರ್…..

ಹುಬ್ಬಳ್ಳಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿರು ವುದನ್ನು ಮಾಜಿ‌ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೀಶ್ ಶೆಟ್ಟರ್ ಅವರು ಸ್ವಾಗತಿಸಿದ್ದಾರೆ.

ರಾಹುಲ್ ಗಾಂಧಿ ಅವರು ಸೂರತ್ ನ್ಯಾಯಾ ಲಯ ನೀಡಿದ್ದ ಶಿಕ್ಷೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.ಈಗ ರಾಹುಲ್ ಗಾಂಧಿ ಅವರು ಸಂಸತ್ ಸದಸ್ಯತ್ವ ಸ್ಥಾನವನ್ನು ಮರಳಿ ಪಡೆಯಲಿದ್ದಾರೆ.ಇದರಿಂದ ಅರ್ಥವಾಗುತ್ತದೆ ಸತ್ಯಕ್ಕೆ ಯಾವಾಗಲೂ ಜಯ ಎನ್ನುವುದು.

ಸತ್ಯದ ದಾರಿಯಲ್ಲಿ ನಡೆಯುವವರೆಗೆ ನ್ಯಾಯ ದೊರೆಯುತ್ತದೆ ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆಯಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.