Mlc ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್ – ಮೂವರು ನಾಮಪತ್ರ ಸಲ್ಲಿಕೆ ಮಹಿಳಾ ಮಣಿಗಳಿಗೆ ಸಿಗಲಿಲ್ಲ ಅವಕಾಶ…..

Suddi Sante Desk
Mlc ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್ – ಮೂವರು ನಾಮಪತ್ರ ಸಲ್ಲಿಕೆ ಮಹಿಳಾ ಮಣಿಗಳಿಗೆ ಸಿಗಲಿಲ್ಲ ಅವಕಾಶ…..

ಬೆಂಗಳೂರು

ತೆರವಾದ ವಿಧಾನ ಪರಿಷತ್ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯಿತು ಹೌದು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮೂವರು ನಾಮಪತ್ರ ಸಲ್ಲಿಕೆ ಮಾಡಿದರು

ವಿಧಾನ ಪರಿಷತ್ತಿನ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ವಿಧಾನಪರಿಷತ್ ಚುನಾವಣೆಯಾದರೂ ಗೆಲ್ಲುತ್ತಾರೆ ಎಂಬ ನಂಬಿಕೆ ವಿಶ್ವಾಸದ ವಾತಾವರಣ ಕಂಡು ಬರುತ್ತಿದೆ

ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ವೇಳೆ ತಮ್ಮ ದೆಹಲಿ ಪ್ರವಾಸ, ಅನ್ನಭಾಗ್ಯ ಯೋಜನೆ ಕೇಂದ್ರ ಅಕ್ಕಿ ಪೂರೈಸದೆ ಇರುವುದು ಸೇರಿದಂತೆ ಹಲವು ವಿಷಯಗಳನ್ನು ಹಂಚಿ ಕೊಂಡಿದ್ದಾರೆ..

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.