This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

ಮುಖ್ಯಶಿಕ್ಷಕ ಪ್ರತಿಭಟನೆ – ಶಾಲೆಯಿಂದ ಜಾಥಾ BEO ಗೆ ಮನವಿ ಶಾಲಾ ಆರಂಭದ ಬೆನ್ನಲ್ಲೇ ಪ್ರತಿಭಟನೆ…..

ಮುಖ್ಯಶಿಕ್ಷಕ ಪ್ರತಿಭಟನೆ – ಶಾಲೆಯಿಂದ ಜಾಥಾ BEO ಗೆ ಮನವಿ ಶಾಲಾ ಆರಂಭದ ಬೆನ್ನಲ್ಲೇ ಪ್ರತಿಭಟನೆ…..
WhatsApp Group Join Now
Telegram Group Join Now

ರಾಯಬಾಗ

ಶಾಲಾ ಆರಂಭದ ಬೆನ್ನಲ್ಲೇ ಮುಖ್ಯಶಿಕ್ಷಕ ರೊಬ್ಬರು ಪ್ರತಿಭಟನೆ ಮಾಡಿದ ಘಟನೆ ಬೆಳಗಾವಿ ಯಲ್ಲಿ ನಡೆದಿದೆ ಹೌದು ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳ ಸಂಖ್ಯೆ ಅನುಸಾರ ಕೊಠಡಿಗಳ ಮಂಜೂರಾತಿಗೆ ಕೋರಿ ಶಾಲೆಯ ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಉಪವಾಸ ಮತ್ತು ಮೌನ ಕಾಲ್ನಡಿಗೆ ಜಾಥಾವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯವರೆಗೆ ಕೈಗೊಂಡರು

ಈ ಶಾಲೆಯಲ್ಲಿ 146 ವಿದ್ಯಾರ್ಥಿಗಳಿದ್ದರೂ ಅಗತ್ಯ ಕೊಠಡಿಗಳಿಲ್ಲ ಈ ಹಿಂದೆ ಶಿಕ್ಷಣ ಇಲಾಖೆ ಆಯುಕ್ತ ರಾಗಿದ್ದ ಅನ್ಬುಕುಮಾರ ಅವರು ಶಾಲೆಗೆ ಅಗತ್ಯವಾಗಿದ್ದ 3 ಶಾಲಾ ಕೊಠಡಿಗಳನ್ನು ಮಂಜೂರು ಮಾಡಿ ಮೂರು ವರ್ಷಗಳೇ ಕಳೆದಿದೆ. ಆದರೆ, ಈವರೆಗೆ ಈ ಬೇಡಿಕೆ ಈಡೇರಿಲ್ಲ’ ಎಂದು ವೀರಣ್ಣ ಹೇಳಿದರು.ಈ ಒಂದು ಶಾಲೆಯಲ್ಲಿ 146 ವಿದ್ಯಾರ್ಥಿಗಳಿದ್ದರೂ ಅಗತ್ಯ ಕೊಠಡಿಗಳಿಲ್ಲ. ಈ ಹಿಂದೆ ಶಿಕ್ಷಣ ಇಲಾಖೆ ಆಯುಕ್ತ ರಾಗಿದ್ದ ಅನ್ಬುಕುಮಾರ ಅವರು ಶಾಲೆಗೆ ಅಗತ್ಯವಾಗಿದ್ದ 3 ಶಾಲಾ ಕೊಠಡಿಗಳನ್ನು ಮಂಜೂರು ಮಾಡಿ ಮೂರು ವರ್ಷಗಳೇ ಕಳೆದಿದೆ. ಆದರೆ, ಈವರೆಗೆ ಈ ಬೇಡಿಕೆ ಈಡೇರಿಲ್ಲ’ ಎಂದು ವೀರಣ್ಣ ಹೇಳಿದರು.ವೀರಣ್ಣ ಮಡಿವಾಳರ ಅವರು ಮಂಗಳವಾರ ಮೌನ ಕಾಲ್ನಡಿಗೆ ಜಾಥಾ ನಡೆಸಿದರು

‘ಮೇಲಧಿಕಾರಿಗಳ ಮೂಲಕ ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ರಾಯಬಾಗ ತಹಶೀಲ್ದಾರ್ ಸುರೇಶ ಮುಂಜೆ ಅವರು ಹೇಳಿದ ಬಳಿಕ ವೀರಣ್ಣ ಪ್ರತಿಭಟನೆ ಹಿಂಪಡೆದರು.’ಸರ್ಕಾರಿ ಶಾಲೆಗೆ ಕೊಠಡಿಗಳನ್ನು ಮಂಜೂರು ಮಾಡುವಂತೆ ಕೋರಿದ್ದು ಒಳ್ಳೆಯ ವಿಚಾರ. ಆದರೆ, ಸರ್ಕಾರಿ ಶಾಲಾ ಶಿಕ್ಷಕರಾಗಿ ಶಿಕ್ಷಣ ಇಲಾಖೆ ವಿರುದ್ಧ ಪ್ರತಿಭಟಿಸಿದ್ದು ತಪ್ಪು. ಇದರಿಂದ ಶಿಕ್ಷಣ ಇಲಾಖೆಗೆ ಮುಜುಗರವಾಗಿದೆ.

ಸರ್ಕಾರದ ವಿರುದ್ಧ ತಪ್ಪು ಸಂದೇಶ ರವಾನೆಯಾಗುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ.ಆರ್ ತಿಳಿಸಿ ದರು.ರಾಯಬಾಗ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನಾನಿರತ ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಅವರು ತಹಶೀಲ್ದಾರ್ ಸುರೇಶ ಮುಂಜೆ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್ ಅವರಿಗೆ ಬೇಡಿಕೆ ಈಡೇರಿಸಲು ಕೋರಿದರು

 

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..

.


Google News

 

 

WhatsApp Group Join Now
Telegram Group Join Now
Suddi Sante Desk