This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ನಿವೃತ್ತಿಗೆ ಒಂದೇ ದಿನ ACB ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ ಕೈ ತುಂಬಾ ಸಂಬಳವಿದ್ದರೂ 50 ಸಾವಿರ ರೂಪಾಯಿ ಗೆ ಕೈ ಚಾಚಿದ್ದ ಜಯಕುಮಾರ್…..

WhatsApp Group Join Now
Telegram Group Join Now

ಮೈಸೂರು

ನಾಳೆ ಬೆಳಗಾದರೆ ವೃತ್ತಿಗೆ ನಿವೃತ್ತಿ ಕೇವಲ ಒಂದು ದಿನ ಇರುವಾಗಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಯೋಬ್ಬ ಎಸಿಬಿ ಬಲೆಗೆ ಬಿದ್ದಿದ್ದಾರೆ. 50 ಸಾವಿರ ಲಂಚ ಸ್ವೀಕರಿಸುವ ವೇಳೆ ದಾಳಿ ಮಾಡಿದ ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜನಾ ಶಾಖೆ ಸದಸ್ಯ ಹಾಗೂ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.ಟಿಪಿಎಂ ಜಿ.ಎಸ್.ಜಯಸಿಂಹ ಹಾಗೂ ಡಾಟಾ ಎಂಟ್ರಿ ಆಪರೇಟರ್ ಬಲೆಗೆ ಬಿದ್ದ ಭ್ರಷ್ಟರಾಗಿದ್ದಾರೆ. 50 ಸಾವಿರ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿ ಗಳು ದಾಳಿ ನಡೆಸಿದ್ದಾರೆ.

ಬಡಾವಣೆಯೊಂದರ ಮಂಜೂರಾತಿಗಾಗಿ ಡೆವಲಪರ್ ವೇಣುಗೋಪಾಲ್ ಎಂಬುವರ ಬಳಿ 3.5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ವೇಣುಗೋಪಾಲ್ ರವರು ಈ ಕುರಿ ತಂತೆ ಎಸಿಬಿ ಯಲ್ಲಿ ದೂರು ದಾಖಲಿಸಿದ್ದರು.ಇಂದು ತಮ್ಮ ಕಚೇರಿಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಆರೋಪಿ ಗಳನ್ನ ವಶಕ್ಕೆ ಪಡೆದಿದ್ದಾರೆ.

ಆರಂಭದಿಂದಲೂ ಮೂಡಾದಲ್ಲಿ ಕೆಲಸ ಮಾಡುತ್ತಿದ್ದ ಜಯಕುಮಾರ್ ಮೇಲೆ ಸಾಕಷ್ಟು ಬಾರಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು.ಹಲವು ತಿಂಗಳಿಂದ ಡೆವಲಪರ್ ವೇಣುಗೋಪಾಲ ಗೆ ಕೂಡ ಲಂಚದ ಬೇಡಿಕೆ ಇಟ್ಟಿದ್ದ ಬಗ್ಗೆ ದೂರು ನೀಡಲಾಗಿತ್ತು.ಮೈಸೂರು ಹೊರ ವಲಯದಲ್ಲಿ ನಿರ್ಮಾಣ ಆಗುತ್ತಿರುವ ಲೇ‌ಔಟ್‌ನ ಪ್ಲಾನ್ ಮಂಜೂರು ಮಾಡಲು ಲಕ್ಷ ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರಂತೆ. ಅದ ರಂತೆ ಇಂದು ಮೊದಲ ಕಂತಿನಲ್ಲಿ ಹಣ ಕೊಡಲು ಮಾತು ಕತೆ ನಡೆದಿತ್ತು.ಇದೇ ಸಂಬಂಧ ಎಸಿಬಿ ದೂರು ನೀಡಿದ್ದ ವೇಣುಗೋಪಾಲ್ ಮೂಡಾ ಕಚೇರಿಗೆ ಬಂದು ಜಯಕು ಮಾರ್‌ಗೆ ಹಣ ನೀಡಲು ಮುಂದಾಗಿದ್ದಾರೆ.ಆ ವೇಳೆ ಡಾಟಾ ಆಪರೇಟರ್ ಹಣ ಪಡೆದಿದ್ದು ತಕ್ಷಣ ಸ್ಥಳಕ್ಕೆ ಬಂದ ಎಸಿಬಿ ಅಧಿಕಾರಿಗಳು ಆರೋಪಗಳನ್ನು ರೆಡ್ ಹ್ಯಾಂಡ್ ಆಗಿ‌ ಹಿಡಿದಿದ್ದಾರೆ.ಎಸಿಬಿ ಎಸ್‌ಪಿ ವಿ.ಜೆ.ಸುಜೀತ್ ನೇತೃತ್ವ ದಲ್ಲಿ ಈ ಒಂದು ದಾಳಿ ನಡೆದಿದೆ.


Google News

 

 

WhatsApp Group Join Now
Telegram Group Join Now
Suddi Sante Desk