ಜಯಲಲಿತಾ ಪರಮಾಪ್ತೆ ಶಶಿಕಲಾ ರಾಜಕೀಯ ನಿವೃತ್ತಿ – ರಾಜಕೀಯ ವಲಯದಲ್ಲಿ ತಲ್ಲಣ

Suddi Sante Desk

ತಮಿಳುನಾಡು –

ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಬರೋಬ್ಬರಿ ನಾಲ್ಕು ವರ್ಷಗಳ ಜೈಲು ವಾಸದ ಬಳಿಕ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಇತ್ತೀಚೆಗೆ ಬಿಡುಗಡೆಯಾಗಿದ್ದರು.

ಇದೀಗ ವಿ,ಕೆ ಶಶಿಕಲಾ ನಟರಾಜನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಶಶಿಕಲಾ ನಟರಾಜನ್ ಘೋಷಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿ ಚಿನ್ನಮ್ಮ ಎಂದೇ ಪ್ರಖ್ಯಾತಿ ಪಡೆದಿರುವ ಶಶಿಕಲಾ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಆಪ್ತೆಯಾಗಿದ್ದರು. ಈ ಮೂಲಕ ತಮಿಳುನಾಡಿನಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು. ಅಕ್ರಮ ಆಸ್ತಿ ಸಂಪಾದನೆ ಆರೋಪ ದಡಿಯಲ್ಲಿ ದೋಷಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.