ಬೆಂಗಳೂರು –
ಹೌದು ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಗೆ ಪೂರ್ಣ ಅಧಿಕಾರ ನೀಡುತ್ತಿದ್ದಂತೆ ಇತ್ತ ಲೋಕಾ ಕಾರ್ಯಾಚರಣೆ ಆರಂಭಗೊಂಡಿದ್ದು BBMP ಯ ಪಶ್ಚಿಮ ವಿಭಾಗದ ಜಂಟಿ ಆಯುಕ್ತರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು ಬಿಬಿಎಂಪಿಯ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ಎಂಬುವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನ ಮಾಡಿದ್ದಾರೆ.
ಹೈಕೋರ್ಟ್ ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಅಧಿಕಾರ ನೀಡಲಾಗಿತ್ತು.ಈ ಹಿನ್ನಲೆಯಲ್ಲಿಯೇ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಎಸಿಬಿ ರದ್ದುಗೊಳಿಸಿ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು.ಈ ಬೆನ್ನಲ್ಲೇ ಲೋಕಾಯುಕ್ತ ಕಾರ್ಯಾ ಚರಣೆ ಚುರುಕುಗೊಂಡಿದ್ದು ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿ ಮೇಲೆ ದಾಳಿ ನಡೆದಿದ್ದು ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿ ಗಳು ದಾಳಿ ನಡೆಸಿದ್ದಾರೆ.ಒಟ್ಟು 8 ಲೋಕಾಯುಕ್ತ ಅಧಿಕಾರಿಗಳು ದಾಳಿಯನ್ನು ನಡೆಸಲಾಗಿತ್ತು.
ಖಾತೆ ಬದಲಾವಣೆ ಸಂಬಂಧ ದೂರು ನೀಡಲಾಗಿತ್ತು ಈ ದೂರಿನ ಹಿನ್ನಲೆಯಲ್ಲಿಯೇ ಲೋಕಾಯುಕ್ತ ಡಿವೈಎಸ್ಪಿ ಮಂಜಯ್ಯ ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಿತ್ತು.ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹಾಗೂ ಬೆಂಗಳೂರು ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾ ಗಿದ್ದು, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ಲೋಕಾ ಯುಕ್ತ ಅಧಿಕಾರಿಗಳು ತೊಡಗಿದ್ದರು.ಈ ಬೆನ್ನಲ್ಲೆ ಮಲ್ಲೇಶ್ವ ರಂನಲ್ಲಿರುವಂತ ಬಿಬಿಎಂಪಿಯ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಅವರ ಪಿಎ ಉಮೇಶ್ ಎಂಬುವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.