ದಾವಣಗೆರೆ –
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಜಿಲ್ಲಾ ಶಾಖೆ, ದಾವಣಗೆರೆ ವತಿಯಿಂದ ದಾವಣಗೆರೆ ಯಲ್ಲಿ ಅರ್ಥಪೂರ್ಣ ವಾಗಿ ಕನ್ನಡ ರಾಜ್ಯೋತ್ಸವ,ಪ್ರತಿಭಾ ಪುರಸ್ಕಾರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಡಗರ ಸಂಭ್ರಮದ ಕಾರ್ಯಕ್ರಮಕ್ಕೆ ರಾಜ್ಯಾಧ್ಯಕ್ಷ ಷಡಾಕ್ಷರಿ ಮತ್ತು ಗಣ್ಯರು ಸಾಕ್ಷಿಯಾದರು.ದಾವಣಗೆರೆಯ ಜಿಲ್ಲಾಡಳಿತ ಭವನದಲ್ಲಿರುವ ತುಂಗಭದ್ರ ಸಭಾಂಗಣದಲ್ಲಿ ಈ ಒಂದು ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು.
ಕನ್ನಡ ರಾಜ್ಯೋತ್ಸವ,ಪ್ರತಿಭಾ ಪುರಸ್ಕಾರ, ಕ್ಯಾಲೆಂಡರ್ ಬಿಡುಗಡೆ,ಆಡಳಿತ ಸರ್ಕಾರಿ ನೌಕರರ ಪಾತ್ರ ವಿಚಾರ ಸಂಕಿರಣ ಕುರಿತಾದ ಕಾರ್ಯಕ್ರಮವನ್ನು ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ವಿಶ್ರಾಂತ ಕರ್ನಾಟಕ ಲೋಕಾಯುಕ್ತರಾದ ಎನ್. ಸಂತೋಷ್ ಹೆಗಡೆ ಅವರು ಪ್ರಜಾಸ್ನೇಹಿ ಆಡಳಿತದಲ್ಲಿ ನೌಕರರ ಪಾತ್ರ ಎಂಬ ವಿಷಯದ ಕುರಿತಂತೆ ಉಪನ್ಯಾಸ ನೀಡಿದರು.
ಜಿಲ್ಲಾಧಿಕಾರಿಗಳಾದ ಶಿವಾನಂದ ಕಾಪಶಿ IAS., ಅವರು 2023ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.ಜಿಲ್ಲಾಧ್ಯಕ್ಷರಾದ ಬಿ.ಪಾಲಾಕ್ಷಿರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಕೇಂದ್ರ ಸಂಘದ ಉಪಾಧ್ಯಕ್ಷರಾದ ಆರ್ ಮೋಹನ್ ಕುಮಾರ್ ಮತ್ತು ದಾವಣಗೆರೆ ಜಿಲ್ಲಾ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನೌಕರರ ಉಪಸ್ಥಿತರಿ ದ್ದರು.
ಸುದ್ದಿ ಸಂತೆ ನ್ಯೂಸ್…..