ಭಾರತೀಯ ರಿಸರ್ವ್ ಬ್ಯಾಂಕ್ ಹೆಸರಿನಲ್ಲಿ ಮೋಸ – ಇಬ್ಬರ ಬಂಧನ – ಹಣ ದುಪ್ಪಟ್ಟು ಆಸೆ ತೋರಿಸಿದ್ದ ಖದೀಮರು

Suddi Sante Desk

ಮೈಸೂರು –

ಹಣವನ್ನು ದುಪ್ಪಟ್ಟು ಮಾಡಿಕೊಡುವ ಆಸೆ ತೋರಿಸಿ ವಂಚನೆ ಭಾರತೀಯ ರಿಸರ್ವ್ ಬ್ಯಾಂಕ್ ಹೆಸರಿನಲ್ಲಿ ಮೋಸ ಮಾಡುತ್ತಿದ್ದ ಜಾಲವೊಂದು ಮೈಸೂರಿನಲ್ಲಿ ಪತ್ತೆಯಾಗಿದೆ.ಹಣ ದುಪ್ಪಟ್ಟು ಆಸೆ ತೋರಿಸಿದ್ದ ಇಬ್ಬರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ‌.


ಕಡಿಮೆ ಅವಧಿಯಲ್ಲಿ ಹಣ ದ್ವಿಗುಣ ಮಾಡಿಸಿ ಕೊಡುವುದಾಗಿ ಹೇಳಿ ವಂಚನೆ ಮಾಡಿದ್ದರು.
ಮೈಸೂರು ಹೆಬ್ಬಾಳ ನಿವಾಸಿ ಮಂಜು (30) ಹಾಗೂ ಶ್ರೀರಾಂಪುರದ ನಿವಾಸಿ ಬಿ.ಶಂಕರ್ (42) ಬಂಧಿತ ಆರೋಪಿಗಳಾಗಿದ್ದಾರೆ‌‌.


ನಿವೃತ್ತ ನೌಕರರನ್ನೇ ಗುರಿಯಾಗಿರಿಸಿಕೊಂಡಿದ್ದ ಈ ಆಸಾಮಿಗಳು.ತಾವು ಆರ್‌ಬಿಐ ನೌಕರರು ಎಂದು ಮೊದಲು ಪರಿಚಯಿಸಿಕೊಳ್ಳುತ್ತಿದ್ದರು.
ಆರ್‌ಬಿಐನಲ್ಲಿ ಹಣ ತೊಡಗಿಸಿದರೆ ಕಡಿಮೆ ಅವಧಿಯಲ್ಲಿ ಹಣ ದ್ವಿಗುಣದ ಆಸೆಯನ್ನು ಹಚ್ಚಿದ್ದರು.

ನಕಲಿ ಬಾಂಡ್‌ಗಳನ್ನು ನೀಡಿ ವಂಚನೆ ಮಾಡುತ್ತಿದ್ದರು.ಇನ್ನೂ ಬಂಧಿತರಿಂದ 25 ನಕಲಿ ಬಾಂಡ್‌ ಗಳನ್ನು ವಶಕ್ಕೆ ತೆಗೆದುಕೊಂಡಿದ್ದು
ವಿಮಾನದಲ್ಲಿ ಬೆಂಗಳೂರು, ದೆಹಲಿ, ಮುಂಬೈ ಹಾಗೂ ಇತರೆ ಸ್ಥಳಗಳಿಗೆ ತೆರಳಿ ಪಂಚತಾರಾ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡುತಿದ್ದರಂತೆ ಆರೋಪಿಗಳು.ಮೇಟಗಳ್ಳಿ ಪೊಲೀಸರಿಂದ ಆರೋಪಿಗಳ ಬಂಧನ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.