ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಜನ್ಮ ದಿನೋತ್ಸವ ಆಚರಣೆಗೆ ಒತ್ತಾಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರಾಯಣ್ಣ ಅಭಿಮಾನಿ ಬಳಗದಿಂದ ಮನವಿ…..

Suddi Sante Desk

ಧಾರವಾಡ –

ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಜನ್ಮ ದಿನೋತ್ಸವವನ್ನು ಆಚರಣೆ ಮಾಡಬೇಕು. ಈ ಒಂದು ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಆದೇಶವನ್ನು ಮಾಡುವಂತೆ ಒತ್ತಾಯಿಸಿ ಧಾರವಾಡದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರಾಯಣ್ಣ ಅಭಿಮಾನಿ ಬಳಗದಿಂದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರಿಗೆ ಮನವಿಯನ್ನು ನೀಡಲಾಯಿತು.

ಸುರೇಶ್ ಗೋಕಾಕ್ ಮಾರ್ಗದರ್ಶನದಲ್ಲಿ ಮಂಜುನಾಥ ಹಂಚಿನಮನಿ ನೇತ್ರತ್ವದಲ್ಲಿ ಈ ಒಂದು ಮನವಿಯನ್ನು ಸಲ್ಲಿಸಲಾಯಿತು.ಈ ಒಂದು ಸಮಯದಲ್ಲಿ ನಾಗರಾಜ ಹಂಚಿನಮನಿ,ಈಶ್ವರ್ ಸಲ್ಲೋಳಿ, ಮುತ್ತು ಹಂಚಿನಮನಿ, ಮಂಜುನಾಥ್ ಹಾದಿಮನಿ, ಶಿವು ಪೂಜಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಶಾಸಕ ಅಮೃತ ದೇಸಾಯಿ ಅವರಿಗೆ ಮನವಿ ನೀಡಿ ಬೇಡಿಕೆ ಈಡೇರಿಸುವಂತೆ ಒತ್ತಾಯವನ್ನು ಮಾಡಿ ಧ್ವನಿ ಎತ್ತುವಂತೆ ಆಗ್ರಹ ವನ್ನು ಮಾಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.