KSRTC ಬಸ್ ಕಂಡಕ್ಟರ್ ಆತ್ಮಹತ್ಯೆ – ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನೌಕರ……

Suddi Sante Desk

ಮಂಗಳೂರು –

ಕೆಎಸ್ಆರ್ ಟಿಸಿ ಅಧಿಕಾರಿಗಳ ವಿರುದ್ದ ನೌಕರರು ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆಎಸ್ಆರ್ ಟಿಸಿ ನಿರ್ವಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು, ಇವರು ಆತ್ಮಹತ್ಯೆಗೆ ಮೊದಲು ಡೆತ್ ನೋಟ್‌ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ ಇವರು.

ಇನ್ನು ಡೆತ್ ನೋಟ್ ನಲ್ಲಿ ತನ್ನ ಸಹೋದರ ಮತ್ತು ಸಂಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕಿರುವ ಬಾಲಕೃಷ್ಣ ಅವರು ಕೆಎಸ್ ಆರ್ ಟಿಸಿ ಸಂಸ್ಥೆಯಲ್ಲಿ ನಿರಂತರ ಕಿರುಕುಳ ನೀಡುತ್ತಿದ್ದ ಬಗ್ಗೆ ಉಲ್ಲೇಖಿಸಿ ಬರೆದಿದ್ದಾರೆ. ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ, ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿರುವ ಅವರು , ನನ್ನ ಮಕ್ಕಳು ಹಾಗು ತಾಯಿಯನ್ನು ಒಳ್ಳೆಯ ರೀತಿಯಲ್ಲಿ ನೋಡಿಕೊಳ್ಳಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.