ಬಸ್ ನಿಲ್ದಾಣ ದಲ್ಲಿಯೇ ಹೃದಯಾಘಾತದಿಂದ ನಿಧನರಾದ KSRTC ಅಧಿಕಾರಿ – ಕರ್ತವ್ಯ ದ ಮೇಲೆ ಬಂದಿದ್ದ ಅಧಿಕಾರಿ ಸಾವು

Suddi Sante Desk

ದಾವಣಗೆರೆ

ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ಬಸ್ ನಿಲ್ದಾಣ ದಲ್ಲಿ ಯೇ ಹೃದಯಾಘಾತದಿಂದ ನಿಧನರಾದ ಘಟನೆ ದಾವಣ ಗೆರೆ ಯಲ್ಲಿ ನಡೆದಿದೆ.ಹೌದು ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್‌.ಸಿ. ತುಷಾರ್(33)ಬಸ್‌ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಸಂಸ್ಥೆಯ ಸಿಬ್ಬಂದಿಯ ಹಳೆ ಪ್ರಕರಣವೊಂದರ ವಿಚಾರಣೆ ಸಂಬಂಧ ಶಿರಸಿಗೆ ಬಂದಿದ್ದ ಅವರು,ಬೆಂಗಳೂರಿಗೆ ವಾಪಸಾಗುವಾಗ ಮಾರ್ಗ ಮಧ್ಯೆ ದಾವಣಗೆರೆಯ ಬಸ್‌ ನಿಲ್ದಾಣದಲ್ಲಿ ನಿಧನ ರಾಗಿದ್ದಾರೆ.

ತಲೆ ಸುತ್ತು ಕಾಣಿಸಿಕೊಂಡು ಆಯಾಸಗೊಂಡಿದ್ದ ಇವರನ್ನು ಕೂಡಲೇ ಸ್ಥಳದಲ್ಲಿದ್ದ ಬಸ್‌ ನ ನಿರ್ವಾಹಕರು ಆಸ್ಪತ್ರೆಗೆ ಕರೆದೊಯ್ಯಲು ಅಣಿಯಾಗುತ್ತಿದ್ದಂತೆಯೇ ಮತ್ತೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ ಹಾಗೂ 4 ತಿಂಗಳ ಮಗು ಇದೆ. ಮೃತದೇಹ ವನ್ನು ಬೆಂಗಳೂರಿಗೆ ಕಳುಹಿಸಲಾಗಿದ್ದು ಅಲ್ಲಿಯೇ ಅಂತ್ಯ ಸಂಸ್ಕಾರ ಮಾಡಲಾಯಿತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.