This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ವಿನಯ ಕುಲಕರ್ಣಿ ಮನೆಗೆ ಲಕ್ಷ್ಮೀ ಹೆಬ್ಬಾಳಕರ ಭೇಟಿ

WhatsApp Group Join Now
Telegram Group Join Now

ವಿನಯ ಬಂಧನ ರಾಜಕೀಯ ಪ್ರೇರತವೆಂದ ಲಕ್ಷ್ಮೀ ಹೆಬ್ಬಾಳಕರ

ಧಾರವಾಡ –

ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನಿವಾಸಕ್ಕೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಭೇಟಿ ನೀಡಿದರು. ಧಾರವಾಡದ ಬಾರಾಕೊಟ್ರಿಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನಿವಾಸಕ್ಕೇ ಆಪ್ತರೊಂದಿಗೆ ತೆರಳಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕುಟುಂಬಸ್ಥರಿಗೆ ಧೈರ್ಯ ಹೇಳಿದರು.

ಅರ್ಧ ಘಂಟೆಗೂ ಹೆಚ್ಚು ಕಾಲ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಮತ್ತ ಮಕ್ಕಳೊಂದಿಗೆ ಕುಳಿತುಕೊಂಡು ಮಾತನಾಡಿದರು. ಅಲ್ಲದೇ ನಿಮ್ಮೊಂದಿಗೆ ಪಕ್ಷ ಇದೆ ನಾವು ಇದ್ದೇವಿ ಇವತ್ತು ಇಲ್ಲವೇ ನಾಳೆ ಗೆದ್ದೆ ಗೆದ್ದು ಬರುತ್ತಾರೆ ಎಂಬ ದೈರ್ಯವನ್ನು ತುಂಬಿದರು. ಇನ್ನೂ ಇದೇ ವೇಳೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿನಯ್ ಅವರು ಈ ಪ್ರಕರಣದಲ್ಲಿ ಗೆದ್ದು ಬರುತ್ತಾರೆ. ಅವರೊಂದಿಗೆ ಸಿದ್ದರಾಮಯ್ಯನವರಾದಿಯಾಗಿ ಇಡೀ ಕಾಂಗ್ರೆಸ್ ಪಕ್ಷದ ಕಟ್ಟಕಡೆಯ ಕಾರ್ಯಕರ್ತರು ಕೂಡ ಇದ್ದಾನೆ. ಇದು ಬಿಜೆಪಿಯ ತಂತ್ರ. ಬಿಜೆಪಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದರು.

ಬಿಜೆಪಿಯವರ ಕೈಯಲ್ಲಿ ಅಧಿಕಾರ ಇದೆ. ಆ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸತ್ಯ ಮೇವ ಜಯತೇ ಸತ್ಯ ಯಾವಾಗಲೂ ಜಯಶಾಲಿಯಾಗುತ್ತದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.ಇವರೊಂದಿಗೆ ಸ್ಥಳೀಯ ಹಲವು ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk