ನಾಡಿನ ಹೆಸರಾಂತ ಹಿರಿಯ ಕವಿ ಲಕ್ಷ್ಮೀ ನಾರಾಯಣ ಭಟ್ಟರು ಇನ್ನಿಲ್ಲ…..

Suddi Sante Desk

ಬೆಂಗಳೂರು –

ನಾಡಿನ ಹೆಸರಾಂತ ಹಿರಿಯ ಕವಿ ಲಕ್ಷ್ಮೀ ನಾರಾ ಯಣ ಭಟ್ಟರು ನಿಧನರಾಗಿದ್ದಾರೆ‌.ಎಲ್ಲರಿಗೂ ಸಲ್ಲುವ ಕವಿ ಎಂದೇ ಪ್ರಸಿದ್ದರಾಗಿದ್ದ ಖ್ಯಾತ ಕವಿ ಎನ್.‌ಎಸ್. ಲಕ್ಷ್ಮೀ ನಾರಾಯಣ ಭಟ್ಟರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ನೈಲಾಡಿ ಶಿವರಾಮ ಲಕ್ಷ್ಮೀ ನಾರಾಯಣ ಭಟ್ಟ ಅವರು ಕನ್ನಡ ಭಾವಗೀತೆಗಳ ಲೋಕದಲ್ಲಿ ಅಮೂಲ್ಯ ಸಾಧನೆ ಮಾಡಿದವರು.1936 ರ ನವೆಂಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದ್ದರು. ಬೆಂಗಳೂರಿನಲ್ಲಿ ಕಾಲೇಜು ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಹಿಂದೆ ಹೀಗೆ ಚಿಮ್ಮುತ್ತಿತ್ತು ಯಾವ ಘಳಿಗೆಯಲ್ಲಿ, ನೀರ ಮೇಲಿನ ಲೀಲೆ, ನಿತ್ಯ ನಿತ್ಯ ಭೂಮಿ, ಮಾಗಿ ಕೊರೆವ ಬಾಳಿಗೆ ಮುಂತಾದ ಭಾವಗೀತೆಗಳು ಪ್ರಸಿದ್ದಿಯಾಗಿದ್ದವು. ವೃತ್ತಿ, ಸುಳಿ, ನಿನ್ನದೆ ನನ್ನ ಮಾತು, ಹೊಳೆಯ ಸಾಲಿನ ಮರ, ಪಾಂಚಾಲಿ, ಅರುಣಗೀತೆ, ಚಿತ್ರಕೂಟ, ದೀಪಿಕಾ, ಬಾರೋ ವಸಂತ, ಸುನೀತಾ ಕವನ ಸಂಕಲನಗಳನ್ನು ಲಕ್ಷ್ಮೀ ನಾರಾಯಣ ಭಟ್ಟ ಬರೆದಿದ್ದರು.ಇನ್ನೂ ಹಿರಿಯ ಕವಿಯ ನಿಧನದಿಂದ ಸಾಹಿತ್ಯ ಲೋಕದಲ್ಲಿ ತುಂಬಲಾರದ ನಷ್ಟವಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.