ಬೆಂಗಳೂರು –
ಹೌದು ಧಾರವಾಡದಲ್ಲಿ ಮತ್ತೊಂದು ನೂತನ ವಾಗಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ವೊಂದು ನಿರ್ಮಾಣವಾಗಲಿದ್ದು ಕೇಂದ್ರ ಸಚಿವ ಅಮಿತ್ ಶಾ ಭೂಮಿ ಪೂಜೆಯನ್ನು ಮಾಡಲಿ ದ್ದಾರೆ.ಧಾರವಾಡದ ಬೆಳಗಾವಿ ರಸ್ತೆಯಲ್ಲಿ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಒಂದು ಕಾರ್ಯಕ್ರಮವು ನಡೆಯಲಿದೆ.ಇನ್ನೂ ಕಾರ್ಯಕ್ರ ಮದ ಸಿದ್ದತೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಪರಿಶೀಲನೆ ಮಾಡಿದರು.
ಧಾರವಾಡದಲ್ಲಿ ನೂತನವಾಗಿ ನಿರ್ಮಾಣವಾಗ ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲ ಯದ ಶಾಖೆಯ ಭೂಮಿ ಪೂಜೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ನೆರವೇರಿಸಲಿದ್ದಾರೆ.ಹೀಗಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಯವರು ಸ್ಥಳೀಯ ಶಾಸಕರು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರೊಂದಿಗೆ ಸ್ಥಳವನ್ನು ಪರಿಶೀಲನೆ ಮಾಡಿದರು.
ಭೂಮಿ ಪೂಜೆಯ ಸಿದ್ದತೆ ಕುರಿತಂತೆ ಎಲ್ಲವನ್ನೂ ವೀಕ್ಷಣೆ ಮಾಡಿ ಮಾಹಿತಿಯನ್ನು ಪಡೆದುಕೊಂ ಡರು.ಕೇಂದ್ರ ಸಚಿವರೊಂದಿಗೆ ಶಾಸಕರಾದ ಅಮೃತ ದೇಸಾಯಿ,ಪಾಲಿಕೆಯ ಮೇಯರ್ ಈರೇಶ ಅಂಚಟಗೇರಿ,ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..