ಸರ್ಕಾರಿ ಶಾಲೆ ಶಿಕ್ಷಕರಿಗೆ ಸೀಮಿತ ವಾದ ಕಲಿಕಾ ಚೇತರಿಕೆ ಕಾರ್ಯಕ್ರಮ – ಯಾರಿಗಿಲ್ಲದ ಈ ತರಬೇತಿ ಇವರಿಗ್ಯಾಕೆ ಎಲ್ಲವೂ ಹೀಗೆ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ.ಕಳೆದ ಎರಡು ವರ್ಷ ಗಳಿಂದ ಕೊರೋನಾ ಕಾರಣದಿಂದಾಗಿ ಕಲಿಕಾ ನಷ್ಟ ಉಂಟಾಗಿದ್ದು ಇದನ್ನು ಸರಿದೂಗಿಸಲು 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ 15 ದಿನಗಳ ಕಾಲ ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸುಮಾರು ಒಂದೂವರೆ ಲಕ್ಷ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಡಿ.ಎಸ್ ಇ.ಆರ್.ಟಿ. ವತಿಯಿಂದ ತರಬೇತಿ ನೀಡಲು ಕ್ರಮಕೈಗೊಳ್ಳ ಲಾಗಿದೆ.ಶಾಲೆ ಆರಂಭಕ್ಕೆ ಒಂದು ವಾರ ಬಾಕಿ ಉಳಿದಿದ್ದು ಕಡಿಮೆ ಸಂಖ್ಯೆಯ ಶಿಕ್ಷಕರಿಗೆ ಮಾತ್ರ ತರಬೇತಿ ನೀಡಲಾ ಗಿದೆ.ಆದರೆ ಖಾಸಗಿ, ಅನುದಾನಿತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯ 24,500 ಕ್ಕೂ ಹೆಚ್ಚು ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರ ಕ್ರಮ ಕೈಗೊಂಡಿಲ್ಲ ಇದು ಅಸಮಾಧಾನಕ್ಕೆ ಕಾರಣವಾಗಿದೆ.

ಕಲಿಕಾ ಚೇತರಿಕೆ ಕಾರ್ಯಕ್ರಮದಿಂದ ಮಕ್ಕಳಿಗೆ ಅನುಕೂಲ ವಾಗುತ್ತದೆ.ಆದರೆ ಇದನ್ನು ಸರ್ಕಾರಿ ಶಾಲೆಗಳಿಗೆ ಮಾತ್ರ ಸೀಮಿತಗೊಳಿಸಿರುವುದು ಖಾಸಗಿ ಹಾಗೂ ಇತರೆ ಶಾಲೆ ಗಳ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.