ಕಾರವಾರ –
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಎಂದು ಯಾರೋ ನಕಲಿ ಆದೇಶವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಸ್ಪಷ್ಟಪಡಿಸಿದ್ದಾರೆ.ಅಲ್ಲದೆ ಜಿಲ್ಲಾಧಿಕಾರಿಯ ಹೆಸರಿನಲ್ಲಿ ನಕಲಿ ಆದೇಶ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕಾನೂನುಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಜುಲೈ 11 ರಂದು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳು ಎಂದಿ ನಂತೆ ಕಾರ್ಯನಿರ್ವಹಿಸಲಿವೆ.ಅದಾಗ್ಯೂ ತೀರ ಅಗತ್ಯ ಕಂಡುಬಂದರೆ ಬಿಇಒ ಮತ್ತು ತಹಶೀಲ್ದಾರರಿಗೆ ರಜೆ ನೀಡುವ ತೀರ್ಮಾನ ಕೈಗೊಳ್ಳುವ ಅವಕಾಶ ಇದೆ ಎಂದು ತಿಳಿಸಿದ್ದಾರೆ.