This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶಿಕ್ಷಕರ ವರ್ಗಾವಣೆ ವಿಘ್ನ ಬೇಗನೆ ನಿವಾರಣೆಯಾಗಲಿ – ನೊಂದು ಕೊಂಡಿ ರುವ ಶಿಕ್ಷಕ ಬಂಧುಗಳಿಗೆ ಆತಂಕ ದೂರವಾಗಲಿ…..

WhatsApp Group Join Now
Telegram Group Join Now

ಬೆಂಗಳೂರು –

ಪ್ರತೀ ವರ್ಷ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಒಂದಿಲ್ಲೊಂದು ವಿಘ್ನ ಎದುರಾಗುತ್ತಲೇ ಇರುತ್ತದೆ.ವರ್ಗಾವಣೆ ಪ್ರಕ್ರಿಯೆ ಸಲೀಸಾಗಿ ನಡೆದಿರುವುದಕ್ಕಿಂತ ಅರ್ಧಕ್ಕೆ ಮೊಟಕು ಗೊಂಡಿರುವುದೇ ಹೆಚ್ಚು. ವರ್ಗಾವಣೆಯನ್ನು ಸರಾಗ ವಾಗಿ ನಡೆಸಲು ಕಾಯ್ದೆಗೆ ತಿದ್ದುಪಡಿ,ಹೊಸ ಕಾಯ್ದೆ, ನಿಯಮಗಳಲ್ಲಿದ್ದನ್ನು ಕಾಯ್ದೆಗೆ ಸೇರಿಸಲು ಅಧ್ಯಾ ದೇಶ ಮೂಲಕ ತಿದ್ದುಪಡಿ ಹೀಗೆ ಹಲವು ರೀತಿಯ ಪ್ರಯತ್ನಗಳು ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಿದೆ ಆದರೂ ಆ ಕೆಲಸ ಮಾತ್ರ ಇನ್ನೂ ಆಗುತ್ತಿಲ್ಲ

ಆದರೆ, ಚುನಾವಣಾ ನೀತಿ ಸಂಹಿತೆ,ಕಡ್ಡಾಯ ವರ್ಗಾವಣೆ,ಹೆಚ್ಚುವರಿ ವರ್ಗಾವಣೆ,ಕಾನೂನಿನ ತೊಡಕು ಸೇರಿದಂತೆ ಹಲವು ಕಾರಣಗಳಿಗಾಗಿ ವರ್ಗಾವಣೆ ಪ್ರಕ್ರಿಯೆ 2017 ರಿಂದ ಈಚೆಗೆ ಸರಿಯಾಗಿ ನಡೆದೇ ಇಲ್ಲ.2020-21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಸಲೀಸಾಗಿ ನಡೆಸಲು ಸರಕಾರ ಶಿಕ್ಷಕ ಮಿತ್ರ ತಂತ್ರಾಂಶ ರೂಪಿಸಿ,ಆಮೂಲಕ ಅರ್ಜಿ ಆಹ್ವಾನಿಸಿತ್ತು.ಸುಮಾರು 72 ಸಾವಿರ ಅರ್ಜಿ ಸಲ್ಲಿಕೆ ಯಾಗಿತ್ತು.

ಮುಂದಿನ ಪ್ರಕ್ರಿಯೆ ಆರಂಭವಾಗುವ ವೇಳೆಗೆ ಕೆಲವು ಶಿಕ್ಷಕರು ಕೋರ್ಟ್‌ ಮೆಟ್ಟಿಲೇರಿದ್ದು ಇದಕ್ಕೆ ಕೋರ್ಟ್‌ ತಡೆ ನೀಡಿತು.ಹೀಗಾಗಿ ಸರಕಾರ ನಿಯ ಮದಲ್ಲಿರುವ ಅಂಶವನ್ನು ಕಾಯ್ದೆಗೆ ಸೇರಿಸಲು (ಕಡ್ಡಾಯ ವರ್ಗಾವಣೆ ಯಿಂದ ಅನ್ಯಾಯವಾಗಿರು ವವರಿಗೆ ಆದ್ಯತೆ ನೀಡುವ ವಿಚಾರ) ಅಧ್ಯಾದೇಶ ಮೂಲಕ ಕಾಯ್ದೆಗೆ ತಿದ್ದುಪಡಿ ತರಲಾಯಿತು. ತಿದ್ದು ಪಡಿ ಕಾಯ್ದೆ ಯಂತೆ ವರ್ಗಾವಣೆ ಪ್ರಕ್ರಿಯೆ ಪುನರ್‌ ಆರಂಭಿಸಲಾಗಿತ್ತು.ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದವರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.ಈಗ ಮತ್ತೆ ಕೆಲವು ಶಿಕ್ಷಕರು 2016-17ನೇ ಸಾಲಿನಲ್ಲಿ ತಾಲೂಕು ಬಿಟ್ಟವರಿಗೆ ಪುನಃ ತವರು ತಾಲೂಕಿಗೆ ಹೋಗಲು ಅವಕಾಶ ನೀಡಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿ ದ್ದಾರೆ.ಹೀಗಾಗಿ ಸದ್ಯ ವರ್ಗಾವಣೆ ಪ್ರಕ್ರಿಯೆ ಸಂಪೂ ರ್ಣವಾಗಿ ಸ್ಥಗಿತಗೊಂಡಿದೆ.

ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವರ್ಗಾವಣೆ ಪ್ರಕ್ರಿಯೆ ವಿಚಾರವಾಗಿ ಶಾಲಾ ಶಿಕ್ಷಕರ ಸಂಘಟನೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಂದು ಭಾಗವಾದರೆ ವರ್ಗಾವಣೆ ಪ್ರಕ್ರಿಯೆಗೆ ಪದೇ ಪದೆ ಕಾನೂನು ತೊಡಕು ಎದುರಾಗದಂತೆ ನೋಡಿ ಕೊಳ್ಳುವುದು ಅಷ್ಟೇ ಮುಖ್ಯ ಪ್ರತಿ ಬಾರಿ ಯೂ ಕಾನೂನಿನ ತೊಡಕಿನಿಂದಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗುತ್ತಾ ಹೋದರೆ,ಕಳೆದ ಹತ್ತು, ಹದಿನೈದು ವರ್ಷಗಳಿಂದ ವರ್ಗಾವಣೆಗಾಗಿ ಕಾದು ಕುಳಿತಿರುವ ಶಿಕ್ಷಕರಿಗೆ ನಿರಂತರ ನಿರಾಸೆಯಾಗುತ್ತಲೇ ಇದೆ.

ಅನೇಕ ಬಾರಿ ಅರ್ಜಿ ಸಲ್ಲಿಸಿ,ಇನ್ನೆನು ಕೌನ್ಸೆಲಿಂಗ್‌ ನಡೆಯಬೇಕು ಎನ್ನುವಾಗ ಪ್ರಕ್ರಿಯೆ ಸ್ಥಗಿತವಾಗಿ, ನೋವು ತಿಂದವರು ಅನೇಕರಿದ್ದಾರೆ.ತವರು ಜಿಲ್ಲೆ ತಾಲೂಕಿಗೆ ಹೋಗಬೇಕು ಎಂದು ಹತ್ತಾರು ವರ್ಷ ಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿರುವ ಸಾವಿ ರಾರು ಶಿಕ್ಷಕರಿಗೆ ಅನ್ಯಾಯವಾಗುತ್ತಲೇ ಇದೆ.

ಸದ್ಯ ಎದುರಾಗಿರುವ ಕಾನೂನಿನ ಕಂಟಕವನ್ನು ಶೀಘ್ರ ನಿವಾರಿಸಿ,ಶಿಕ್ಷಕರ ವರ್ಗಾವಣೆಗೆ ಯಾವುದೇ ರೀತಿಯ ವಿಘ್ನ,ಕಾನೂನಿನ ತೊಡಕು ಎದುರಾಗ ದಂತೆ ಸರಕಾರ ಹಾಗೂ ಶಿಕ್ಷಣ ಇಲಾಖೆ ಎಚ್ಚರ ವಹಿಸಬೇಕು ಹಾಗೆಯೇ ಶಿಕ್ಷಕರು ತಾವು ಬಯಸುವ ತಾಲೂಕುಗಳಿಗೆ ಹೋಗಿ,ಶೈಕ್ಷಣಿಕ ಚಟುವಟಿಕೆಯಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ,ಶ್ರದ್ಧೆಯಿಂದ ತೊಡಗಿಸಿ ಕೊಳ್ಳುವ ವ್ಯವಸ್ಥೆ ನಿರ್ಮಾಣ ಮಾಡಬೇಕು.ಇಲ್ಲ ವಾದರೆ,ಶಿಕ್ಷಕರು ವರ್ಗಾವಣೆಗಾಗಿ ಅಲೆದಾಡು ವುದು ಇನ್ನಷ್ಟು ಹೆಚ್ಚಲಿದೆ.


Google News

 

 

WhatsApp Group Join Now
Telegram Group Join Now
Suddi Sante Desk