ಹಾಸನ –
ದಯಾಮರಣ ಕೋರಿ ಅತಿಥಿ ಉಪನ್ಯಾಸಕರು ರಾಜ್ಯಪಾ ಲರಿಗೆ ಮತ್ತು ಮುಖ್ಯಮಂತ್ರಿ ಅವರಿಗೆ ಪತ್ರವನ್ನು ಬರೆದಿ ದ್ದಾರೆ. ಹೌದು ಹಾಸನ ಜಿಲ್ಲೆಯಿಂದ ಸಾಮೂಹಿಕ ವಾಗಿ ಪತ್ರವನ್ನು ಬರೆದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ

ಹಾಸನ ಜಿಲ್ಲೆಯ 300ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕ ರಿಂದ ದಯಾಮರಣ ಕೋರಿ ರಾಷ್ಟ್ರಪತಿ,ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಪತ್ರವನ್ನು ಬರೆದಿದ್ದಾರೆ

ಹಾಸನ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಪತ್ರ ಬರೆದು ಪೋಸ್ಟ್ ಮಾಡಿದ್ದಾರೆ ಅತಿಥಿ ಉಪನ್ಯಾಸಕರು. ಕಳೆದ ಹಲವು ದಿನಗಳಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರು
ಸರ್ಕಾರದ ಇಬ್ಬಗೆ ನೀತಿಗೆ ಹಾಸನದಲ್ಲಿ ಭಾರಿ ಆಕ್ರೋಶವು ಅತಿಥಿ ಉಪನ್ಯಾಸಕರಿಂದ ಕೇಳಿ ಬಂದಿದ್ದು ಈ ಒಂದು ಮನವಿಗೆ ಸ್ಪಂದಿಸದಿದ್ದರೆ ಉಗ್ರವಾದ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ


ಸೋಮವಾರದಿಂದ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ ಅತಿಥಿ ಉಪನ್ಯಾಸಕರು