ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈ ಬಿಡಿ ಪ್ರಧಾನಿ ಗೆ ಪತ್ರ – ಖಾಸಗಿ ಶಾಲೆಗಳ ಒಕ್ಕೂಟದಿಂದ ಪ್ರಧಾನಿ ಗೆ ದೂರು ಒತ್ತಾಯ…..

Suddi Sante Desk

ಬೆಂಗಳೂರು –

ರಾಜ್ಯದ ಶಿಕ್ಷಣ ಸಚಿವರನ್ನು ಈ ಕೂಡಲೇ ಸಚಿವ ಸಂಪುಟ ದಿಂದ ಕೈ ಬಿಡುವಂತೆ ಒತ್ತಾಯ ಮಾಡಿ ರಾಜ್ಯದ ಖಾಸಗಿ ಶಾಲೆಗಳ ಒಕ್ಕೂಟದವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದಿದ್ದಾರೆ.ಹೌದು ಒಂದು ಕಡೆಗೆ ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ ಮತ್ತೊಂದು ಕಡೆಗೆ ಪಠ್ಯ ಪುಸ್ತಕ ಪರಿಷ್ಕರಣಾ ವಿಚಾರ ಸೇರಿದಂತೆ ಶಿಕ್ಷಣ ಇಲಾಖೆ ಯ ಸಾಲು ಸಾಲು ಆಡಳಿತ ವೈಫಲ್ಯಗಳ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಜಾಗೊಳಿಸುವಂತೆ ರುಪ್ಸಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ.

ಈ ಬಗ್ಗೆ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ(ರುಪ್ಸಾ ಕರ್ನಾಟಕ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು ರಾಜ್ಯದ ಪ್ರತಿ ಮಗುವಿಗೂ ಕಡ್ಡಾಯವಾಗಿ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ.ಆದ್ರೇ ಕರ್ನಾಟಕದಲ್ಲಿ ಇದರ ಕನಿಷ್ಠ ಜ್ಞಾನವೂ ಇಲ್ಲದ ಪಕ್ಕಾ ವ್ಯಾಪಾರಿ ಮನೋಭಾವ ನದ ವ್ಯಕ್ತಿ ಮಂತ್ರಿಯಾಗಿರುವ ಹಿನ್ನಲೆಯಲ್ಲಿ ಇದು ಈಡೇ ರುತ್ತಿಲ್ಲ.ಈ ಹಿನ್ನಲೆಯಲ್ಲಿ ಅವರನ್ನು ವಜಾ ಮಾಡುವಂತೆ ಸಿಎಂ ಬೊಮ್ಮಾಯಿಗೆ ಸೂಚಿಸಬೇಕು ಎಂದು ಕೋರಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.