ಆಗಸ್ಟ್ 9 ರಂದು ಕಲಘಟಗಿ ಗೆ ಲೋಕಾಯುಕ್ತ ಪೊಲೀಸರು ಪ್ರವಾಸ – ಯಾವುದೇ ಸಮಸ್ಯೆಗಳ ಕುರಿತು ದೂರು ನೀಡಲು ಸಾರ್ವಜನಿಕರಿಗೆ ಕರೆ…..

Suddi Sante Desk
ಆಗಸ್ಟ್ 9 ರಂದು ಕಲಘಟಗಿ ಗೆ ಲೋಕಾಯುಕ್ತ ಪೊಲೀಸರು ಪ್ರವಾಸ – ಯಾವುದೇ ಸಮಸ್ಯೆಗಳ ಕುರಿತು ದೂರು ನೀಡಲು ಸಾರ್ವಜನಿಕರಿಗೆ ಕರೆ…..

ಧಾರವಾಡ

ಕರ್ನಾಟಕ ಲೋಕಾಯುಕ್ತ ಆಗಸ್ಟ್ 09 ರಂದು ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣಕ್ಕೆ ಆಗಮಿಸಲಿದ್ದು ಯಾವುದೇ ಸಮಸ್ಯೆ ಗಳಿದ್ದರೆ ಸಾರ್ವಜನಿಕರು ದೂರು ಮತ್ತು ಅಹವಾಲು ಸಲ್ಲಿಸಬಹುದು ಅದನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕಾರ ಮಾಡಲಿದ್ದಾರೆ

ಹೌದು ಕರ್ನಾಟಕ ಲೋಕಾಯುಕ್ತ ಪೊಲೀಸರು ಧಾರವಾಡ ಕಛೇರಿಯ ಪೊಲೀಸ್ ಅಧಿಕಾರಿಗಳು ಆಗಸ್ಟ್ 09, 2023 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಘಟಗಿ ತಾಲೂಕ ಪಂಚಾಯತ್ ಕಾರ್ಯಾಲಯ ಸಭಾಭವನದಲ್ಲಿ ಸಾರ್ವಜನಿಕರಿಂದ ದೂರು ಮತ್ತು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ

ಕರ್ನಾಟಕ ಲೋಕಾಯುಕ್ತ ಪೋಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರವರು ಜಿಲ್ಲೆಯ ಸಾರ್ವಜನಿಕರಿಂದ ದೂರು ಸ್ವೀಕಾರ ಮಾಡುವ ವರಿದ್ದು, ಯಾವುದೇ ಸರಕಾರಿ ಅಧಿಕಾರಿ, ನೌಕರರು ಸರ್ಕಾರಿ ಸೇವೆ ಒದಗಿಸುವವಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ, ಅನಾವಶ್ಯಕ ವಿಳಂಬ ಮಾಡುತ್ತಿದ್ದಲ್ಲಿ,

ಯಾವುದಾದರು ಸರ್ಕಾರಿ ಭೂಮಿಗಳ ಒತ್ತುವರಿ ಯಾಗಿದ್ದಲ್ಲಿ ಕಾಮಗಾರಿಗಳಲ್ಲಿ ಅಕ್ರಮ ಅಥವಾ ಕಳಪೆ ಕಾರ್ಯ ನಡೆದಿದ್ದರ ಬಗ್ಗೆ ದೂರು ನೀಡಬ ಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.