ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ಪೆಕ್ಟರ್ – ಇನ್ಸ್ಪೆಕ್ಟರ್ ರೊಂದಿಗೆ ಟ್ರ್ಯಾಪ್ ಆದ ಸಿಬ್ಬಂದಿ…..3K ತಗೆದುಕೊಳ್ಳುವಾಗ ಲಾಕ್…..

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ಪೆಕ್ಟರ್ – ಇನ್ಸ್ಪೆಕ್ಟರ್ ರೊಂದಿಗೆ ಟ್ರ್ಯಾಪ್ ಆದ ಸಿಬ್ಬಂದಿ…..3K ತಗೆದುಕೊಳ್ಳುವಾಗ ಲಾಕ್…..

ಬೆಂಗಳೂರು

ಲೋಕಾಯುಕ್ತ ಬಲೆಗೆ ಪೊಲೀಸ್ ಇನ್ಸ್ಪೆಕ್ಟರ್ ರೊಬ್ಬರು ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಹೌದು ಠಾಣೆ ಯಿಂದ ಸ್ಕೂಟರ್‌ ಬಿಡುಗಡೆಗೊಳಿಸಲು ಲಂಚ ಪಡೆದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್‌ ಠಾಣೆಯ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್‌ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾ ಯುಕ್ತ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ವಶದಲ್ಲಿದ್ದ ಸ್ಕೂಟರ್‌ ಬಿಡುಗಡೆಗೊಳಿಸಲು ನ್ಯಾಯಾಲಯವು ಆದೇಶ ಮಾಡಿತ್ತು.ಈ ಸಲುವಾಗಿ ದೂರುದಾರರು ಠಾಣೆಯ ಇನ್ಸಕ್ಟರ್ ಮಹಮ್ಮದ್ ಷರೀಫ್ ಅವರನ್ನು ಭೇಟಿ ಮಾಡಿದ್ದರು. ಸ್ಕೂಟರ್‌ ಬಿಡುಗಡೆಗೊಳಿಸಲು ₹ 5ಸಾವಿರ ಲಂಚ ನೀಡುವಂತೆ ಷರೀಫ್‌ ಬೇಡಿಕೆ ಇಟ್ಟಿದ್ದರು. ಮೊತ್ತವನ್ನು ಕಡಿಮೆ ಮಾಡುವಂತೆ ಕೋರಿದಾಗ ಠಾಣಾ ಬರಹಗಾರರಾದ ನಾಗರತ್ನ ಅವರನ್ನು ಭೇಟಿ ಮಾಡಲು ತಿಳಿಸಿದ್ದರು.

ಅವರ ಬಳಿ ಹೋದಾಗ, ಅವಾಚ್ಯವಾಗಿ ಬೈದು ₹ 3 ಸಾವಿರ ಲಂಚ ನೀಡುವಂತೆ ಹೇಳಿದ್ದರು. ಲಂಚ ನೀಡಲು ಮನಸ್ಸಿಲ್ಲದ ಕಾರಣ ಅವರು ಲೋಕಾಯುಕ್ತ ಪೊಲೀಸ ರಿಗೆ ದೂರು ನೀಡಿದ್ದರು’ ಎಂದು ಲೋಕಾಯುಕ್ತ ಪೊಲೀಸರರು ತಿಳಿಸಿದ್ದಾರೆ.

‘ದೂರುದಾರ ವ್ಯಕ್ತಿಯಿಂದ ₹ 3 ಸಾವಿರವನ್ನು ಪಡೆದ ತಕ್ಷಣ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಪ್ರಕರ ಣದ ತನಿಖೆ ನಡೆಯುತ್ತಿದ್ದು  ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ (ಪ್ರಭಾರ ) ನಂದಿನಿ ಬಿ.ಎನ್, ಡಿವೈಎಸ್‌ಪಿ ಗಾನ ಪಿ.ಕುಮಾರ್, ಇನ್‌ಸ್ಪೆಕ್ಟರ್‌ ಅಮಾನುಲ್ಲಾ.ಎ, ಚಂದ್ರಶೇಖರ್ ಕೆ.ಎನ್. ಮತ್ತು ಉಡುಪಿ ಠಾಣೆಯ ಇನ್‌ಸ್ಪೆಕ್ಟರ್‌ ಮಂಜುನಾಥ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.