This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

M R ಪಾಟೀಲ್ ಗೆಲ್ಲಿಸಿ ಅಭಿವೃದ್ಧಿ ಗೆ ಜೈಕಾರ ಹಾಕಿ ಚಿತ್ರನಟ ಸುದೀಪ್ ಕರೆ – ಕುಂದಗೋಳ ಕ್ಷೇತ್ರದಲ್ಲಿ ಪಾಟೀಲರ ಪರ ಅಬ್ಬರದ ಪ್ರಚಾರ…..

WhatsApp Group Join Now
Telegram Group Join Now

ಕುಂದಗೋಳ

ಪಾಟೀಲ್ ಗೆಲ್ಲಿಸಿ,ಅಭಿವೃದ್ಧಿ ಗೆ ಜೈಕಾರ ಹಾಕಿ ಚಿತ್ರನಟ ಸುದೀಪ್ ಕರೆ ಹೌದು ಕುಂದಗೋಳ ಕ್ಷೇತ್ರದ ಬಿಜೆಪಿ ಅಬ್ಯರ್ಥಿಯನ್ನು ಪ್ರಚಂಡ‌ ಬಹುಮತದಿಂದ‌ ಗೆಲ್ಲಿಸಿ ಕಳಿಸಿ,ಇಲ್ಲಿ ಹದಗೆಟ್ಟಿ ರುವ ರಸ್ತೆ ಸರಿಪಡಿಸುತ್ತಾರೆ ಎಂದು ಚಿತ್ರ ನಟ ಸುದೀಪ್ ಗೆದ್ದ ಮೇಲೂ ಅವರಿಂದ ಸಾದ್ಯ ಆಗದಿದ್ದರೆ ಆ ಕೆಲಸ ಮಾಡಿಸಿಕೊಡಲು ನನ್ನನ್ನು ಕೇಳಿ ಎಂದರು.

ತಾಲೂಕಿನ ಸಂಶಿ ಗ್ರಾಮದ‌ ನಾಡರ ಬಯಲಿನಲ್ಲಿ ಜರುಗಿದ ಬಹಿರಂಗ ಸಭೆಯಲ್ಲಿ ಮಾತನಾಡಿದ‌ ಅವರು ನಿಮ್ಮೂರಲ್ಲಿನ‌ ಪರಸ್ಥಿತಿ ಹದಗೆಟ್ಟು ಹೋಗಿದೆ ಆದರೂ ನೀವು ಸುಮ್ಮನಿದ್ದೀರಿ ಎಂದು ಕೊಂಡಿಲ್ಲ ಏಕೆಂದರೆ ನೀವೆಲ್ಲಾ ಬಿಜೆಪಿ ಅಬ್ಯರ್ಥಿ ಎಂ.ಆರ್.ಪಾಟೀಲ್ ಅವರನ್ನು ಖಂಡಿತ ಗೆಲ್ಲಿಸು ತ್ತೀರಿ ಎಂಬ ವಿಶ್ವಾಸ ನನಗೀಗ ಮೂಡಿದೆ.

ಇನ್ನೂ ರಾಜ್ಯದಲ್ಲಿ ‌ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು.‌ಎಂ.ಆರ್.ಪಾಟೀಲ ಕುಂದಗೋಳ ಶಾಸಕರಾಗ ಬೇಕು.‌ಅದಕ್ಕಾಗಿ ನೀವೆಲ್ರೂ ಮತ ಹಾಕಬೇಕು. ಹಾಕಿಸಬೇಕು ಎಂದು ತಮ್ಮದೇ ಸಿನಿಮಾ‌ ಧಾಟಿಯಲ್ಲಿ ಕರೆ ನೀಡಿದರು.

ಕುಂದಗೋಳ ಪಟ್ಟಣದಲ್ಲಿ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿದು ರಸ್ತೆ ಮೂಲಕ ಸಂಶಿ ತಲುಪಿ ಬಸ್ ನಿಲ್ದಾಣದ ಮೂಲಕ ಮೆರವಣಿಗೆಯಲ್ಲಿ ಸಾಗಿ ನಂತರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡರು.
ಅಭಿಮಾನಿಗಳ ಉತ್ಸಾಸ ಕಂಡು ಸಂತಸಗೊಂಡ ಸುದೀಪ್, ಆಕಾಶದತ್ತ ಕೇಸರಿ‌ ಬಲೂನ್ ಹಾರಿಸಿ ವಿಜಯದ ಸಂಕೇತ ತೋರಿಸಿದರು.

ಬಿಜೆಪಿ ಅಬ್ಯರ್ಥಿ ಎಂ.ಆರ್.ಪಾಟೀಲ ಮಾತನಾಡಿ ನಾನು‌ ನಿಮ್ಮ ಸೇವಕ,ನಾನು‌ ಯಾವುದಕ್ಕೂ ಆಶೆಪಡುವವನಲ್ಲ.ಅಭಿವೃದ್ಧಿ ಮಾಡಿ‌ ಮತ ಕೇಳುತ್ತಿದ್ದೇನೆ ಎಂದರು.
ಜಿಲ್ಲಾ ಗ್ರಾಮೀಣ ಅದ್ಯಕ್ಷ ಬಸವರಾಜ ಕುಂದಗೋಳಮಠ ಸಹಿತ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಕುಂದಗೋಳ…..


Google News

 

 

WhatsApp Group Join Now
Telegram Group Join Now
Suddi Sante Desk