ಚಾಮರಾಜನಗರ –
ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು. ಕ್ರೇಜಿಸ್ಟಾರ್ ರವಿಚಂದ್ರನ್ ಈ ಹಾಡು ಕೇಳುತ್ತಿದ್ದರೆ ಪ್ರೀತಿಸಬೇಕು ಪ್ರೀತಿಸಿದರೆ ಜಗಕೆ ಹೆದರಬಾರದು .ಹೌದು ಹೀಗೆ ಪ್ರೀತಿ ಮಾಡಿ ಯಾರಿಗೂ ಹೆದರದೆ ಮದುವೆಗೆ ಸಿದ್ದವಾಗಿದ್ದ ಜೋಡಿಯೊಂದಕ್ಕೇ ಮಚ್ಚಿನೇಟು ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಸತ್ಯ ಹಾಗೂ ಧನಲಕ್ಷ್ಮಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರವನ್ನು ಯುವತಿ ಪೋಷಕರಿಗೆ ತಿಳಿಸಿ ಮದುವೆಯಾಗಲು ಇಬ್ಬರು ಸಿದ್ಧವಾಗಿದ್ದರು.ಇನ್ನೇನು ಮದುವೆಗೆ ಎರಡು ದಿನಗಳು ಬಾಕಿ ಇರುವಾಗಲೇ ಜೋಡಿಗೆ ಮಚ್ಚಿನೇಟು ಹಾಕಲಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಿ.ಜಿ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ.ಸತ್ಯ ಹಾಗೂ ಧನಲಕ್ಷ್ಮಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರ ಯುವತಿ ಪೋಷಕರಿಗೆ ತಿಳಿದು ಅವರು ವಿರೋಧಿಸಿದ್ದರು. ಮನೆಯವರ ತೀವ್ರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಗೆ ಮುಂದಾಗಿದ್ದರು.

ಇದರಿಂದ ಸಿಟ್ಟಿಗೆದ್ದ ಮನೆಯವರು ಆಕೆಯ ತಂದೆ ಹಾಗೂ ಅಣ್ಣನೇ ಗಂಭೀರ ಹಲ್ಲೆ ಮಾಡಿದ್ದಾರೆ. ಗ್ರಾಮದ ಮೆಡಿಕಲ್ ಸ್ಟೋರ್ ಮುಂಭಾಗದಲ್ಲಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಧನಲಕ್ಷ್ಮೀ ಮೇಲೆ ಹಲ್ಲೆ ಮಾಡಲು ಆಕೆಯ ತಂದೆ ಶಿವಸ್ವಾಮಿ ಹಾಗೂ ಅಣ್ಣ ಮಹೇಂದ್ರ ಮಚ್ಚು, ಕುಡಗೋಲು ಹಿಡಿದು ಬಂದಿದ್ದರು. ಅಲ್ಲದೆ ಮೆಡಿಕಲ್ ಮುಂಭಾಗದಲ್ಲಿದ್ದ ಧನಲಕ್ಷ್ಮಿ ಮೇಲೆ ದಾಳಿ ಮಾಡಿ ಕುಡುಗೋಲಿನಿಂದ ಏಕಾಏಕಿ ಹಲ್ಲೆ ಮಾಡಿದ್ದಾರೆ.

ಹಲ್ಲೆಯ ಪರಿಣಾಮ ಯುವತಿ ಕೈಯ 4 ಬೆರಳುಗಳೇ ಕಟ್ ಆಗಿವೆ. ಸದ್ಯ ಯುವತಿ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅಲ್ಲದೆ ಪ್ರಾಣ ರಕ್ಷಿಸುವಂತೆ ಅಳಲು ತೋಡಿಕೊಂಡಿದ್ದಾಳೆ ಪ್ರಕರಣ ಕುರಿತಂತೆ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.