ಅತಿಥಿ ಶಿಕ್ಷಕ ಆತ್ಮಹತ್ಯೆ – ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಾದೇವ ಸರ್

Suddi Sante Desk

ರಬಕವಿ –

ಶಿಕ್ಷಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು ಮಹಾದೇವ ಬಿಳ್ಲೂರ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದಾನೆ.ಬನಹಟ್ಟಿಯ ಖಾಸಗಿ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕನಾಗಿ ಕರ್ತವ್ಯವನ್ನು ಮಾಡುತ್ತಿದ್ದರು.

ಎರಡು ವರ್ಷಗಳಿಂದ ಶಾಲೆಗಳು ನಡೆಯದ ಹಿನ್ನಲೆಯಲ್ಲಿ ತೀವ್ರವಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಇವರು ಇತ್ತೀಚಿಗೆ ಇವರ ಪತ್ನಿಯ ಚಿಕಿತ್ಸೆಗಾಗಿ ಒಂದು ಲಕ್ಷ ರೂಪಾಯಿ ಸಾಲವನ್ನು ಮಾಡಿದ್ದು ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ದ್ದರು.ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹೆಂಡತಿಯ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿ ದ್ದಾರೆ.

ಇನ್ನೂ ವಿಷಯ ತಿಳಿದ ಬನಹಟ್ಟಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.