ಮಹಾರಾಷ್ಟ್ರ –
ಐತಿಹಾಸಿಕ ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ದಲ್ಲಿ ಜನೆವರಿ 22 ರಂದು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ ಹೌದು ಮಹಾರಾಷ್ಟ್ರದ ಶಿವಸೇನಾ-ಬಿಜೆಪಿ ಸರ್ಕಾರವು ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ದೃಷ್ಟಿಯಿಂದ ಜನವರಿ 22 ರಂದು ರಾಜ್ಯದಲ್ಲಿ ಸಾರ್ವಜನಿಕ ರಜೆಯನ್ನು ಘೋಷಿ ಸಿತು.
ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ,ಜನವರಿ 22 ರಂದು ರಾಜ್ಯದಲ್ಲಿ ಸಾರ್ವ ಜನಿಕ ರಜೆ ಎಂದು ಘೋಷಿಸಲಾಗಿದೆ.ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳಿಗೆ ನಿಯೋ ಜಿಸಿದ ಅಧಿಕಾರದ ಅಡಿಯಲ್ಲಿ ಮಹಾರಾಷ್ಟ್ರ ಸರ್ಕಾರವು ರಜೆಯನ್ನು ಘೋಷಿಸಿದೆ ಎಂದು ಅಧಿಸೂಚನೆ ತಿಳಿಸಿದೆ.
ಬಿಜೆಪಿ ನೇತೃತ್ವದ ಕೇಂದ್ರವು ಈಗಾಗಲೇ ರಾಮಮಂದಿರ ಉದ್ಘಾಟನೆಯಂದು ದೇಶಾ ದ್ಯಂತ ತನ್ನ ಎಲ್ಲಾ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನದ ರಜೆ ಘೋಷಿಸಿದೆ.
ಸುದ್ದಿ ಸಂತೆ ನ್ಯೂಸ್ ಮಹಾರಾಷ್ಟ್ರ…..