ಮಂಡ್ಯ SP ಯಾಗಿ ಅಧಿಕಾರ ವಹಿಸಿಕೊಂಡ ಮಲ್ಲಿಕಾರ್ಜುನ ಬಾಲದಂಡಿ – ಸಕ್ಕರೆ ನಾಡಿನಲ್ಲಿ ಖಡಕ್ ಪೊಲೀಸ್ ಅಧಿಕಾರಿಯ ಅಧಿಕಾರ…..

Suddi Sante Desk
ಮಂಡ್ಯ SP ಯಾಗಿ ಅಧಿಕಾರ ವಹಿಸಿಕೊಂಡ ಮಲ್ಲಿಕಾರ್ಜುನ ಬಾಲದಂಡಿ – ಸಕ್ಕರೆ ನಾಡಿನಲ್ಲಿ ಖಡಕ್ ಪೊಲೀಸ್ ಅಧಿಕಾರಿಯ ಅಧಿಕಾರ…..

ಮಂಡ್ಯ

ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ಮಲ್ಲಿಕಾರ್ಜುನ ಬಾಲದಂಡಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಒಂದು ಆದೇಶ ದ ಬೆನ್ನಲ್ಲೇ ಇತ್ತ ಅಧಿಕಾರ ವನ್ನು ಕೂಡಾ ಸ್ವೀಕರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎನ್.ಯತೀಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಯಾ ಗಿದ್ದ ಮಲ್ಲಿಕಾರ್ಜುನ ಬಾಲದಂಡಿ ಅವರು ಹಿಂದೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಕಮಿಷನ ರೇಟ್ ಘಟಕದಲ್ಲಿ ಅಪರಾಧ ಹಾಗೂ ಸಂಚಾರ ವಿಭಾಗದಲ್ಲಿ ಉಪ ಪೊಲೀಸ್ ಆಯುಕ್ತರಾಗಿ ಹಾಗೂ ತುಮಕೂರು ಜಿಲ್ಲಾ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು.

ಎನ್.ಯತೀಶ್ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ 3 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದು ಕರ್ತವ್ಯ ದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮಂಡ್ಯ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.