ಶಿಕ್ಷಕಿ ಆತ್ಮಹತ್ಯೆ ಹಬ್ಬದ ದಿನದಂದು ಆತ್ಮಹತ್ಯೆ ಹಿಂದೆ ಹುಟ್ಟುಕೊಂಡಿವೆ ಹಲವು ಅನುಮಾನಗಳು

Suddi Sante Desk
ಶಿಕ್ಷಕಿ ಆತ್ಮಹತ್ಯೆ  ಹಬ್ಬದ ದಿನದಂದು ಆತ್ಮಹತ್ಯೆ ಹಿಂದೆ ಹುಟ್ಟುಕೊಂಡಿವೆ ಹಲವು ಅನುಮಾನಗಳು

ಬೆಂಗಳೂರು

 

ಪತಿ ಮತ್ತು ಆತನ ಕುಟುಂಬ ಸದಸ್ಯರ ಕಿರುಕುಳ ಹಾಗೂ ದೌರ್ಜನ್ಯಕ್ಕೆ ಬೇಸತ್ತು ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆತಿಪ್ಪಾರೆಡ್ಡಿ ಲೇಔಟ್‌ ನಿವಾಸಿ ನಿಹಾರಿಕಾ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯಾಗಿದ್ದಾರೆ

ಇನ್ನೂ ಟನೆ ಕುರಿತು ಮೃತರ ಪೋಷಕರು ನೀಡಿದ ದೂರಿನ ಮೇರೆಗೆ ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಿಹಾರಿಕಾ ಪತಿ ಕಾರ್ತಿಕ್‌(32)ಎಂಬಾತನನ್ನು ಈಗಾಗಲೇ ಬಂಧಿಸಿದ್ದಾರೆ.

 

ಮೈಸೂರು ಮೂಲದ ನಿಹಾರಿಕಾ, ಬೆಂಗಳೂರಿ ನಲ್ಲಿ ಎಂಜಿನಿಯರ್‌ ಆಗಿದ್ದ ಕಾರ್ತಿಕ್‌ನನ್ನು ಪ್ರೀತಿಸುತ್ತಿದ್ದರು ಈ ವಿಚಾರ ಹಿರಿಯರಿಗೆ ತಿಳಿಸಿ, ಬಳಿಕ ಎರಡು ಕುಟುಂಬದ ಒಪ್ಪಿಗೆ ಪಡೆದು ಮದುವೆಯಾಗಿದ್ದರು.ನಿಹಾರಿಕಾ ಪುಟ್ಟೇನಹಳ್ಳಿ ಯಲ್ಲಿಯೇ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದರು. ಕಾರ್ತಿಕ್‌ ಕುಟುಂಬ ಪುಟ್ಟೇನಹಳ್ಳಿಯಲ್ಲಿನ ತಿಪ್ಪಾರೆಡ್ಡಿ ಲೇಔಟ್‌ನಲ್ಲಿರುವ ಎಲಿಗೆಂಟ್‌ ಪ್ಯಾಲೇಸ್‌ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ ನಲ್ಲಿ ವಾಸವಾಗಿತ್ತು.ಮದುವೆಯ ನಂತರ ನಿಹಾರಿಕಾ ಕೂಡ ಪತಿ ಜತೆ ಇಲ್ಲಿಯೇ ವಾಸವಾಗಿದ್ದರು.

ಕೆಲ ದಿನಗಳ ನಂತರ ಕಾರ್ತಿಕ್‌ ಕುಟುಂಬ ಸದಸ್ಯರು ಆಕೆಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲು ಆರಂಭಿಸಿದ್ದಾರೆ.ಅದರಿಂದ ನೊಂದಿದ್ದ ಆಕೆ ತನ್ನ ಪೋಷಕರಿಗೆ ತಿಳಿಸಿದ್ದರು. ಬಳಿಕ ಆಕೆಯ ತಂದೆ ಅಳಿಯ ಕಾರ್ತಿಕ್‌ ಕುಟುಂಬ ಸದಸ್ಯರಿಗೆ ಪುತ್ರಿಗೆ ತೊಂದರೆ ಕೊಡ ದಂತೆ ಮನವಿ ಮಾಡಿದ್ದರು.ಆದರೂ ಆರೋ ಪಿಗಳು ಕಿರುಕುಳ ನೀಡುತ್ತಿದ್ದರು.ಹೀಗಾಗಿ ಮನೆ ಬಿಟ್ಟು ತವರು ಮನೆಗೆ ಹೋಗಿದ್ದರು.ಅದರಿಂದ ವಿಚಲಿತನಾದ ಕಾರ್ತಿಕ್‌,ಪತ್ನಿಗೆ ಕರೆ ಮಾಡಿ ಮನೆಗೆ ವಾಪಸ್‌ ಬರುವಂತೆ ಕೇಳಿಕೊಂಡಿದ್ದ. ಅಲ್ಲದೆ ಆತನೇ ಸಂಬಂಧಿ ಮನೆಯಲ್ಲಿದ್ದ ಪತ್ನಿ ಯನ್ನು 20 ದಿನಗಳ ಹಿಂದಷ್ಟೇ ಮನೆಗೆ ವಾಪಸ್‌ ಕರೆತಂದಿದ್ದ ಅನಂತರವೂ ಕಾರ್ತಿಕ್‌ ಮನೆಯ ವರು ಆಕೆಗೆ ತೊಂದರೆ ಕೊಡುತ್ತಿದ್ದರು ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.