ಮಾರ್ಚ್ 1 ರ ಸರ್ಕಾರಿ ನೌಕರರ ಪ್ರತಿಭಟನೆ ರಾಜ್ಯಾಧ್ಯಕ್ಷರಿಂದ ಮಾಹಿತಿ – ಹೋರಾಟ ನಡೆದೆ ನಡೆಯುತ್ತದೆ ಆದೇಶ ಹೊರಡಿಸಿದರೆ ಹೋರಾಟ ವಾಪಸ್ ಎಂದ ರಾಜ್ಯಾಧ್ಯಕ್ಷರು…..

Suddi Sante Desk
ಮಾರ್ಚ್ 1 ರ ಸರ್ಕಾರಿ ನೌಕರರ ಪ್ರತಿಭಟನೆ ರಾಜ್ಯಾಧ್ಯಕ್ಷರಿಂದ ಮಾಹಿತಿ – ಹೋರಾಟ ನಡೆದೆ ನಡೆಯುತ್ತದೆ ಆದೇಶ ಹೊರಡಿಸಿದರೆ ಹೋರಾಟ ವಾಪಸ್ ಎಂದ ರಾಜ್ಯಾಧ್ಯಕ್ಷರು…..

ಶಿವಮೊಗ್ಗ

ಮಾರ್ಚ್​ 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಡೆದೆ ನಡೆಯುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಹೇಳಿದರು ಶಿವಮೊಗ್ಗ ದಲ್ಲಿ ಮಾತನಾಡಿದ ಅವರು  ವಿಧ ಬೇಡಿಕೆ ಆಗ್ರಹಿಸಿ ಮಾರ್ಚ್​ 1 ರಿಂದ ಸರ್ಕಾರಿ ನೌಕರರು ಅನಿರ್ದಿ ಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿ ದ್ದೇವೆ ಎಂದರು

ರಾಜ್ಯ ಸರ್ಕಾರಿ ನೌಕರರು ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್​ 1 ರಿಂದ ಸರ್ಕಾರಿ ನೌಕರರು  ಅನಿರ್ದಿಷ್ಟಾವಧಿವರೆಗೆ ಮುಷ್ಕರ ಮಾಡಲು ನಿರ್ಧರಿಸಿದ್ದೇವೆ  ರಾಜ್ಯದ ಎಲ್ಲಾ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದರು

 

 

ಶಿವಮೊಗ್ಗದಲ್ಲಿ ಪ್ರತಿನಿಧಿಗಳೊಂದಿಗೆ ಮಾತನಾ ಡಿದ ಅವರು ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದಾಸೀನತೆ ತೋರಿಸಿದ್ದಾರೆ.ಸಿಎಂ ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರ ಆಗಿದೆ.ಶಾಲೆ,ಕಾಲೇಜು,ಆಸ್ಪತ್ರೆ ಸೇರಿ ದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ಮಾಡಲಿದ್ದಾರೆ ಎಂದರು.

ಸರ್ಕಾರ 7ನೇ ವೇತನ ಆಯೋಗದ ಶಿಫಾರಸನ್ನು ಮಧ್ಯಂತರ ಆದೇಶ ಹೊರಡಿಸಬೇಕು ಅಂದ್ರೆ ಮಾತ್ರ ನಮ್ಮ ಹೋರಾಟ ವಾಪಸ್ ಪಡೆಯು ತ್ತೇವೆ ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ. ಇನ್ನೂ 3-4 ದಿನ ಸಮಯವಿದೆ ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.