This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

National News

ಹುಬ್ಬಳ್ಳಿ ಧಾರವಾಡ ನಡುವಿನ ಹೆದ್ದಾರಿ ವಿಸ್ತರಣೆಗೆ ಸಭೆ – ಶೀಘ್ರದಲ್ಲೇ ಟೆಂಡರ್

WhatsApp Group Join Now
Telegram Group Join Now

ಹುಬ್ಬಳ್ಳಿ …

ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆಯನ್ನು ಷಟ್ಪತ ರಸ್ತೆ ನಿರ್ಮಾಣ ಕುರಿತಂತೆ ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಭೆ ನಡೆಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಬೈಪಾಸ್ 30 ಕಿಮಿ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಮಾರ್ಪಡಿಸಲು ಈ ಕೂಡಲೇ ಟೆಂಡರ್ ಕರೆಯುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಡಿ.ಪಿ.ಆರ್. ತಯಾರಿಸಲಾಗಿದ್ದು ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಆರ್.ಓ.ಬಿ. ಮತ್ತು ಆರ್.ಯು.ಬಿ. ನಿರ್ಮಾಣ ಮಾಡಲು ಸೂಚನೆ ನೀಡಿದ್ದು, ನಿರ್ಮಾಣಕ್ಕೆ 33 ಹೆಕ್ಟೇರ್ ಭೂ ಸ್ವಾಧೀನ ಅವಶ್ಯವಾಗಿದ್ದು, ಭೂಮಿ ವಶಪಡಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಗಡ್ಕರಿ ಸೂಚಿಸಿದ್ದಾರೆ.

ಈ ವಿಷಯವಾಗಿ ಕಳೆದ ಜುಲೈ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ ಬೈಪಾಸ್ ರಸ್ತೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆಯನ್ನಾಗಿಸಲು ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಕೇಂದ್ರ ಕಚೇರಿಗೆ ಶೀಘ್ರವಾಗಿ ಕಳುಹಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ ನೀಡಿದ್ದರು.

ಈ ಹಿಂದೆ ರಸ್ತೆ ನಿರ್ಮಿಸಿ, ನಿರ್ವಹಿಸುತ್ತಿರುವ ನಂದಿ ಹೈವೇ ಇಂಫ್ರ್ಯಾಂಸ್ತ್ರಕ್ಚರ ಕಂಪನಿಯ ಪ್ರತಿನಿಧಿಗಳು ಇಂದಿನ ಸಭೆಯಲ್ಲಿ ಭಾಗಿಯಾಗಿದ್ದು, ಅವರು ಕೂಡಾ ಈ ಯೋಜನೆಗೆ ಒಪ್ಪಿಗೆ ನೀಡಿದ್ದಾರೆ. ಸಾರ್ವಜನಿಕರ ಅನಕೂಲಕ್ಕಾಗಿ ಸರ್ವಿಸ್ ರಸ್ತೆಯನ್ನು ಎರಡೂ ಕಡೆ ನಿರ್ಮಿಸಲು ಸೂಚನೆ ನೀಡಲಾಗಿದೆ.ಇಂದಿನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ಕಾರ್ಯದರ್ಶಿಗಳು ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk