ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ನೀಡಿದ ಸಚಿವ ಮಧು ಬಂಗಾರಪ್ಪ – ಬಡ್ತಿಗೆ ಪರೀಕ್ಷೆ ಬರೆಯುವ ನಿಮಯ ಶೀಘ್ರದಲ್ಲೇ ರದ್ದಾಗಲಿದೆ ಮಾಹಿತಿ ನೀಡಿದ ಶಿಕ್ಷಣ ಸಚಿವರು…..

Suddi Sante Desk
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ನೀಡಿದ ಸಚಿವ ಮಧು ಬಂಗಾರಪ್ಪ – ಬಡ್ತಿಗೆ ಪರೀಕ್ಷೆ ಬರೆಯುವ ನಿಮಯ ಶೀಘ್ರದಲ್ಲೇ ರದ್ದಾಗಲಿದೆ ಮಾಹಿತಿ ನೀಡಿದ ಶಿಕ್ಷಣ ಸಚಿವರು…..

ಬೆಳಗಾವಿ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ನೀಡಿದ ಸಚಿವ ಮಧು ಬಂಗಾರಪ್ಪ  ಬಡ್ತಿಗೆ ಪರೀಕ್ಷೆ ಬರೆಯುವ ನಿಮಯ ಶೀಘ್ರದಲ್ಲೇ ರದ್ದಾಗಲಿದೆ ಮಾಹಿತಿ ನೀಡಿದ ಶಿಕ್ಷಣ ಸಚಿವರು

ರಾಜ್ಯದ ಶಿಕ್ಷಕರಿಗೆ ಬಡ್ತಿ ಪಡೆಯಲು ಪರೀಕ್ಷೆ ಬರೆಯುವ ವ್ಯವಸ್ಥೆಯನ್ನು ರದ್ದು ಮಾಡಲಾಗು ವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು ರಾಜ್ಯ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ಸುದ್ದಿಯನ್ನು ಶೀಘ್ರವೇ ನೀಡಲಾಗುತ್ತದೆ ಬಡ್ತಿಗೆ ಪರೀಕ್ಷೆಯನ್ನು ಬರೆಯುವ ವ್ಯವಸ್ಥೆಯನ್ನು ರದ್ದು ಮಾಡಲಾಗುತ್ತದೆ ಎಂದರು.

ಈ ಮೂಲಕ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ನೀಡಿದರು.ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ಶಿಕ್ಷಕ ರ ಬಡ್ತಿ ನಿಯಮದಲ್ಲಿನ ಲೋಪ ಕುರಿತಂತೆ ಮಾಡಿದಂತ ಪ್ರಸ್ತಾಪಕ್ಕೆ ಉತ್ತರಿಸಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ ಹಾಗೂ ಪ್ರೌಢ ಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಿಗೆ ಶಿಕ್ಷಕರ ಬಡ್ತಿ ನೀಡುವುದಕ್ಕೆ ಕೆಲ ನಿಯಮ ರೂಪಿಸಲಾಗಿದೆ.

ಅದರಂತೆ ಪ್ರೌಢ ಶಾಲೆ ನೇಮಕಾತಿ ಸಂದರ್ಭ ದಲ್ಲಿ ಶೇ.50ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಿದರೇ ಉಳಿದ ಶೇ.50 ರಷ್ಟು ಹುದ್ದೆಗಳನ್ನು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ಮೂಲಕ ತುಂಬಿಕೊಳ್ಳಲಾಗುತ್ತಿದೆ ಎಂದರು.ಇದೇ ರೀತಿ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ರಷ್ಟು ಹುದ್ದೆಗಳನ್ನು ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ.

ಉಪನ್ಯಾಸಕರಾಗಿ ಬಡ್ತಿ ಪಡೆಯಲಿಚ್ಚಿಸುವ ಶಿಕ್ಷಕರು ಅರ್ಹತಾ ಪರೀಕ್ಷೆ ಬರೆಯಬೇಕಿದ್ದು ಅದರಲ್ಯಿ ಸಾಮಾನ್ಯ ವರ್ಗಕ್ಕೆ ಸೇರಿದವರು ಶೇ.55 ಹಾಗೂ ಎಸ್ಸಿ ಎಸ್ಟಿಯವರು ಶೇ.50ರಷ್ಟು ಅಂಕಗಳನ್ನು ಪಡೆಯಬೇಕಿದೆ ಎಂದರು ಅವರ ಹೇಳಿಕೆಗೆ ಮರಿತಿಬ್ಬೇಗೌಡ ಸೇರಿದಂತೆ ಹಲವು ಪ್ರತಿಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

ಅಲ್ಲದೇ ಬಡ್ತಿಗಾಗಿ ಪ್ರೌಢಶಾಲಾ ಶಿಕ್ಷಕರು ಪರೀಕ್ಷೆ ಬರೆಯುವ ನಿಯಮದಿಂದಾಗಿ ಶಿಕ್ಷಕರಿಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಇದು ರದ್ದು ಮಾಡಬೇಕು ಎಂದು ಆಗ್ರಹಿಸಿದರು.ಇದಕ್ಕೆ ಉತ್ತರಿಸಿದಂತ ಸಚಿವ ಮಧು ಬಂಗಾರಪ್ಪ ಅರ್ಹತಾ ಪರೀಕ್ಷೆ ಕುರಿತಂತೆ ಪ್ರೌಢ ಶಾಲಾ ಶಿಕ್ಷಕರನ್ನು ನನ್ನ ಬಳಿ ಬಂದು ಅಳಲು ತೋಡಿ ಕೊಂಡಿದ್ದಾರೆ.

ಶಿಕ್ಷಕರೇ ಪರೀಕ್ಷೆ ಬರೆಯುವುದಕ್ಕೆ ನನ್ನ ಸಹಮತ ವಿಲ್ಲ.ಹೀಗಾಗಿ ಮುಂದಿನ ವಾರ ಶಿಕ್ಷಕರ ಕ್ಷೇತ್ರ ದಿಂದ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅದನ್ನು ರದ್ದು ಅಥವಾ ಮಾರ್ಪಾಡು ಮಾಡುವ ಕುರಿತು ನಿರ್ಣಯಿಸಲಾಗುತ್ತದೆ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.