ಮುಖ್ಯಮಂತ್ರಿ ಭೇಟಿಯಾದ ಶಾಸಕ ಅಮೃತ ದೇಸಾಯಿ ಕ್ಷೇತ್ರಕ್ಕೆ ಮತ್ತು ಮರಾಠ ಸಮಾಜಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಒತ್ತಾಯ

Suddi Sante Desk

ಬೆಂಗಳೂರು –

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು.ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದ ಶಾಸಕರು ಕ್ಷೇತ್ರದ ಅಭಿವೃದ್ದಿಗೆ ಅನುದಾನವನ್ನು ಬಿಡುಗಡೆ ಮಾಡುವಂತೆ ಪತ್ರಗಳನ್ನು ನೀಡಿದರು.ಇದರೊಂದಿಗೆ ಕ್ಷೇತ್ರದಲ್ಲಿನ ಮರಾಠ ಸಮಾಜದ ಜನರ ಏಳಿಗೆಗೆ ಮರಾಠ ಆಭಿವೃದ್ಧಿ ನಿಗಮದಿಂದ ಹೆಚ್ಚಿನ ಅನುದಾನ ಒದಗಿಸಿಬೇ ಕೆಂದು ಮನವಿ ಮಾಡಿದರು.

ಈ ಕುರಿತಂತೆ ಸಮಗ್ರವಾದ ಪತ್ರಗಳನ್ನು ನೀಡಿ ಈ ಕೂಡಲೇ ಅನುದಾನ ಬಿಡುಗಡೆಗೆ ಸೂಚನೆ ನೀಡುವಂತೆ ಒತ್ತಾಯವನ್ನು ಮಾಡಿದರು.ಈ ಸಂಧರ್ಭದಲ್ಲಿ ಮರಾಠ ಆಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪ್ರಕಾಶ ಪಾಗೋಜಿ ಸೇರಿದಂತೆ ಹಲವರು ಉಪಸ್ತಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.