ಕುಂದಗೋಳ –
ಮತಕ್ಷೇತ್ರದ ಯಾವುದೇ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ ಸ್ಪಂದಿಸುವೆ ಎಂದು ಕುಂದಗೋಳ ಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.ಕುಂದಗೋಳ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಶಾಸಕರ ವ್ಯಾಪ್ತಿಯಲ್ಲಿ ಬರುವ ಕಟ್ನೂರು ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿಗೆ ಕೂಡುವ 1 ಕೋಟಿ ರೂಪಾಯಿ ವೆಚ್ಚದಲ್ಲಿನ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.1 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು ಕ್ಷೇತ್ರದಲ್ಲಿ ವಿಪರೀತ ಮಳೆಯಿಂದಾಗಿ ಬಹಳಷ್ಟು ಪ್ರಮಾಣದಲ್ಲಿ ರಸ್ತೆಗಳು ಹದಗೆಟ್ಟಿದ್ದು. ಅವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನಾನು ಕೆಲಸವನ್ನು ಮಾಡುತ್ತೇನೆ ಅಲ್ಲದೆ ಸರಕಾರ ಒದಗಿಸುವ ಮೂಲಭೂತ ಸೌಕರ್ಯವನ್ನು ನೀಡಲು ಸದಾ ಸಿದ್ಧಳಾಗಿದ್ದೆನೆ ಎಂದರು.

ಅಲ್ಲದೇ ಕ್ಷೇತ್ರದಲ್ಲಿನ ಯಾವುದೇ ಸಮಸ್ಯೆಗಳಿಗೆ ಸದಾ ಯಾವಾಗಲೂ ನಾನು ಸ್ಪಂದಿಸುತ್ತೇನೆ ಎಂದು ಹೇಳಿದರು. ಈ ಒಂದು ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಮುಖಂಡರಾದ ಚಂದ್ರು ಸಂಕಣ್ಣವರ. ರಪಿಕ ಅರಳಿಕಟ್ಟಿ.ಅಪ್ಪಾಜಿರಾವ ಪಾಟೀಲ ಸೇರಿದಂತೆ ಗ್ರಾಮದ ಹಿರಿಯರು ಗುತ್ತಿಗೆದಾರರು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.