ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎನ್ ಹೆಚ್ ಕೋನರಡ್ಡಿ – ನವಲಗುಂದ ಕ್ಷೇತ್ರದ ರೈತ ಬಾಂಧವರಿಗೆ ಮತ್ತೊಂದು ಸೌಲಭ್ಯಕ್ಕೆ ಚಾಲನೆ ನೀಡಿದ ಶಾಸಕರು…..

Suddi Sante Desk
ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎನ್ ಹೆಚ್ ಕೋನರಡ್ಡಿ – ನವಲಗುಂದ ಕ್ಷೇತ್ರದ ರೈತ ಬಾಂಧವರಿಗೆ ಮತ್ತೊಂದು ಸೌಲಭ್ಯಕ್ಕೆ ಚಾಲನೆ ನೀಡಿದ ಶಾಸಕರು…..

ನವಲಗುಂದ

ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎನ್ ಹೆಚ್ ಕೋನರಡ್ಡಿ – ನವಲ ಗುಂದ ಕ್ಷೇತ್ರದ ರೈತ ಬಾಂಧವರಿಗೆ ಮತ್ತೊಂದು ಸೌಲಭ್ಯಕ್ಕೆ ಚಾಲನೆ ನೀಡಿದ ಶಾಸಕರು ಹೌದು

ಕಾಲುಬಾಯಿ ರೋಗದಿಂದ ಬಳಲುತ್ತಿರುವ ಜಾನುವಾರಗಳಿಗೆ ನೀಡುವ ಲಸಿಕೆಯನ್ನು ನೀಡುವ ಕಾರ್ಯಕ್ರಮಕ್ಕೆ ಶಾಸಕ ಎನ್ ಹೆಚ್ ಕೋನರಡ್ಡಿ ಚಾಲನೆ ನೀಡಿದರು.ಹೌದು ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ರೈತರಿಗೆ ಸಾಕಷ್ಟು ಸೌಲಭ್ಯ ಗಳನ್ನು ಸರ್ಕಾರದಿಂದ ವಯಕ್ತಿಕವಾಗಿ ನೀಡಿ ರುವ ಶಾಸಕರು ಈಗ ಮತ್ತೊಂದು ಕಾರ್ಯಕ್ರ ಮಕ್ಕೆ ಚಾಲನೆ ನೀಡಿದರು.

ಕ್ಷೇತ್ರದಲ್ಲಿ ಕಾಲುಬಾಯಿ ರೋಗದಿಂದ ಬಳಲು ತ್ತಿರುವ ಜಾನುವಾರುಗಳಿಗೆ ಲಸಿಕೆಯನ್ನು ನೀಡುವ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ಯನ್ನು ನೀಡಲಾಯಿತು.ನವಲಗುಂದ ನಗರದ ಪಶು ಕಚೇರಿ ಆಸ್ಪತ್ರೆಯಲ್ಲಿ ಪಶು ಸಂಗೋಪನೆ ಇಲಾಖೆಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪ್ರಾರಂಭವಾ ಗುವ ನಾಲ್ಕನೇ ಸುತ್ತಿನ “ಕಾಲುಬಾಯಿ ರೋಗ ಲಸಿಕಾ” ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿ ಮೆರಗು ನೀಡಿದರು.

ಈ ಸಂದರ್ಭದಲ್ಲಿ ಪಶು ಕಚೇರಿ ಆಸ್ಪತ್ರೆಯ ಆಡಳಿತ ಮಂಡಳಿಯವರು, ಪುರಸಭೆ ಸದಸ್ಯರು ಹಾಗೂ ಮುಂತಾದ ಗ್ರಾಮಸ್ಥರು ಉಪಸ್ಥಿತ ರಿದ್ದರು.

ಸುದ್ದಿ ಸಂತೆ ನ್ಯೂಸ್ ನವಲಗುಂದ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.