This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ಬೆಲ್ಲದ ಗೆ ಬುದ್ಧಿ ಹೇಳಿದ ಶಾಸಕ ಶಂಕರಪಾಟೀಲ -ನೀವು ಇನ್ನೂ ಸಣ್ಣವರು ಎಂದ ನವಲಗುಂದ ಶಾಸಕ….!

WhatsApp Group Join Now
Telegram Group Join Now

ಹುಬ್ಬಳ್ಳಿ –

ನಮ್ಮ ಸಮಾಜದ ಮುಖಂಡರಾದ ಶಾಸಕ ಯತ್ನಾಳ ಹಾಗೂ ಬೆಲ್ಲದ ಯಾವ ಅರ್ಥದಲ್ಲಿ ಮಾತನಾಡುತ್ತಿ ದ್ದಾರೆ ಗೊತ್ತಿಲ್ಲ.ಬೆಲ್ಲದ ಅವರು ಚಿಕ್ಕವರು ಇದ್ದಾರೆ. ಬೆಲ್ಲದ ಅವರು ಪಕ್ಷದ ತೀರ್ಮಾನದಂತೆ ನಡೆಯಲಿ ಎಂದು ನವಲಗುಂದ ಬಿಜೆಪಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಬೆಲ್ಲದ ಅವರಿಗೆ ಸಲಹೆ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿ ದ ಅವರು ಬೆಲ್ಲದ ಅವರು ದೂರದೃಷ್ಟಿ ಇಟ್ಟುಕೊಂ ಡು ರಾಜಕಾರಣ ಮಾಡಬೇಕು.ಅರವಿಂದ ಬೆಲ್ಲದ ಧಾರವಾಡ ಜಿಲ್ಲೆಯ ಶಾಸಕರಲ್ಲಿನ ಒಗ್ಗಟ್ಟು ಒಡೆಯ ಬಾರದು.ಬೆಲ್ಲದ ಅವರು ಸಿಎಂ ಆದರೆ ನಮಗೂ ತುಂಬಾ ಖುಷಿ ಇದೆ.ಆದರೆ ಅದಕ್ಕೆ ಇನ್ನೂ ತುಂಬಾ ಸಮಯ ಇದೆ.ಧಾರವಾಡ ಜಿಲ್ಲೆಯಲ್ಲಿ ಪಕ್ಷದ ಹಿರಿ ಯರಾದ ಪ್ರಹ್ಲಾದ ಜೋಶಿ, ಜಗದೀಶ್ ಶೆಟ್ಟರ್ ಇದ್ದಾರೆ‌.ಅವರ ಹೆಸರಿಗೆ ದಕ್ಕೆ ಬಾರದಂತೆ ಬೆಲ್ಲದ ಅವರು ನಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ರಾಜ್ಯಕ್ಕೆ ಬಿಜೆಪಿ ಪಕ್ಷದ ವರಿಷ್ಠ ಅರುಣ್ ಸಿಂಗ್ ಆಗಮಿಸುವ ವಿಚಾರವಾಗಿ ಮಾತನಾಡಿದ ಅವರು ವರಿಷ್ಠರನ್ನು ಭೇಟಿ ಮಾಡುವ ಬಗ್ಗೆ ಸದ್ಯಕ್ಕೆ ನಮ್ಮ ಪಕ್ಷದ ಶಾಸಕರಿಗೆ ಸೂಚನೆ ಬಂದಿಲ್ಲ.ವರಿಷ್ಠರು ಶಾಸಕರ ಜೊತೆ ಪ್ರತ್ಯೇಕ ಚರ್ಚೆ ಅವಕಾಶ ನೀಡಿದ ರೇ ನಮ್ಮ ಅಭಿಪ್ರಾಯ ತಿಳಿಸುತ್ತೇವೆ ಎಂದರು.

ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ.ಬಿಎಸ್ ವೈ ನೇತೃತ್ವದಲ್ಲಿ ಚುನಾವಣೆ ನಡೆದಿದೆ.‌ ಅವರೇ ನಮ್ಮ ನಾಯಕರು.ಬಿ.ಎಸ್.ವೈ ನಾಯಕತ್ವಕ್ಕೆ ನನ್ನ ಬೆಂಬಲ ಇದೆ.ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ. ಸದ್ಯಕ್ಕೆ ನಿಗಮ ಸ್ಥಾನ ನೀಡಿದ್ದಾರೆ.ಅದು ನನಗೆ ತೃಪ್ತಿ ಇದೆ ಎಂದು ಶಾಸಕ ಶಂಕರ ಪಾಟೀಲ ಮುನೇನ ಕೊಪ್ಪ ಹೇಳಿದರು.


Google News

 

 

WhatsApp Group Join Now
Telegram Group Join Now
Suddi Sante Desk