ಕಿರುಕುಳಕ್ಕೂ ಒಂದು ಮಿತಿ ಇರುತ್ತೆ ಎನ್ನುತ್ತಾ ನೋವು ತೋಡಿಕೊಂಡ ಶಾಸಕ ವಿನಯ ಕುಲಕರ್ಣಿ – ED ದಾಳಿ ಬೆನ್ನಲ್ಲೇ ಬೇಸರ ವ್ಯಕ್ತಪಡಿಸಿದ ಶಾಸಕ ವಿನಯ್ ಕುಲಕರ್ಣಿ ಹೇಳಿಕೆ…..

Suddi Sante Desk
ಕಿರುಕುಳಕ್ಕೂ ಒಂದು ಮಿತಿ ಇರುತ್ತೆ ಎನ್ನುತ್ತಾ ನೋವು ತೋಡಿಕೊಂಡ ಶಾಸಕ ವಿನಯ ಕುಲಕರ್ಣಿ – ED ದಾಳಿ ಬೆನ್ನಲ್ಲೇ ಬೇಸರ ವ್ಯಕ್ತಪಡಿಸಿದ ಶಾಸಕ ವಿನಯ್ ಕುಲಕರ್ಣಿ ಹೇಳಿಕೆ…..

ಬೆಂಗಳೂರು

ಕಿರುಕುಳಕ್ಕೂ ಒಂದು ಮಿತಿ ಇರುತ್ತೆ ಎನ್ನುತ್ತಾ ನೋವು ತೋಡಿಕೊಂಡ ಶಾಸಕ ವಿನಯ ಕುಲಕರ್ಣಿ – ED ದಾಳಿ ಬೆನ್ನಲ್ಲೇ ಬೇಸರ ವ್ಯಕ್ತಪಡಿಸಿದ ಶಾಸಕ ವಿನಯ್ ಕುಲಕರ್ಣಿ ಹೇಳಿಕೆ

ಎಲ್ಲದಕ್ಕೂ ಒಂದು ಮಿತಿ ಇದ್ದೇ ಇರುತ್ತದೆ ಪದೇ ಪದೇ ನನಗೆ ಕಿರುಕುಳು ಕೋಡುವ ಕೆಲಸ ನಡೆಯುತ್ತಿದೆ ಎಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯಗೌಡ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಜಾರಿ ನಿರ್ದೇಶನಾ ಲಯ ಅಧಿಕಾರಿಗಳು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ್ದರು.

ಇದೀಗ ಈ ಒಂದು ದಾಳಿಯ ಕುರಿತು ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದು ED ದಾಳಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ ಕಿರುಕುಳಕ್ಕೂ ಒಂದು ಮಿತಿ ಇರುತ್ತೆ ನನಗೆ ತುಂಬಾ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮನೆಯಲ್ಲಿ ಅಧಿಕಾರಿಗಳು ನಿನ್ನೆಯಿಂದ ಶೋಧ ನಡೆಸಿ ಪರಿಶೀಲನೆ ಅಂತ್ಯಗೊಳಿಸಿ ತೆರಳಿದ್ದು ಬಳಿಕ ಮಾಧ್ಯಮ ಗವವರೊಂದಿಗೆ ಮಾತನಾಡಿದ ಶಾಸಕ ವಿನಯ್ ಕುಲಕರ್ಣಿ ನನ್ನ ಮನೆಯ ಮೇಲೆ ಇಡಿ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತವಾಗಿದೆ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದೇನೆ.

ಮನೆಯಲ್ಲಿ ದಾಖಲೆ ಪರಿಶೀಲನೆ ವೇಳೆ ಇಡೀ ಅಧಿಕಾರಿ ಗಳಿಗೆ ಏನು ಸಿಕ್ಕಿಲ್ಲ ಹೈಕೋರ್ಟ್ ನಲ್ಲಿ ನಾನು ಸಾಕ್ಷಿದಾರ ನಾಗಿದ್ದೇನೆ.ಕೆಲವು ಪ್ರಕರಣಗಳಿಗೆ ಅಡ್ಡಿಪಡಿಸಲು ನನ್ನ ವಿರುದ್ಧ ಷಡ್ಯಂತರ ನಡೆಸಿದ್ದಾರೆ. ಕಾಲಿಗೆ ಬಿದ್ದು ಇಡಿ ಅಧಿಕಾರಿಗಳ ಜೊತೆ ಹೋಗುವುದು ಬಾಕಿ ಇದೆ. ಕಳೆದ ಒಂದು ತಿಂಗಳಿಂದ ನನಗೆ ಕಿರುಕುಳ ನೀಡಲಾಗುತ್ತಿದೆ.

ಶಾಸಕನಾಗಿ ನನ್ನ ಕ್ಷೇತ್ರಕ್ಕೆ ಹೋಗಲಾಗುತ್ತಿಲ್ಲ ಯಾರೇ ಆಗಲಿ ಜನರಿಗೆ ಮೋಸ ಮಾಡುವುದು ಒಳ್ಳೆಯ ಕೆಲಸವಲ್ಲ. ಐಶ್ವರ್ಯ ಗೌಡ ಖಾತೆಗೆ ಹಣ ವರ್ಗವಾಗಿ ದ್ದರೆ ಸಿಕ್ಕೇ ಸಿಗುತ್ತದೆ. ಪ್ರತಿಯೊಂದುಕ್ಕೂ ನಾನೇ ಟಾರ್ಗೆಟ್ ಆಗಿದ್ದೇನೆ. ಕಿರುಕುಳಕ್ಕೂ ಒಂದು ಮಿತಿ ಇರುತ್ತದೆ. ಇದರಿಂದ ನನಗೆ ತುಂಬಾ ನೋವಾಗಿದೆ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.