ಗುಂಡು ಹಾರಿಸಿಕೊಂಡು ಶಾಸಕರ ಮಗ ಆತ್ಮಹತ್ಯೆ – ನಿಗೂಢವಾಗಿ ಉಳಿದ ಸಾವಿನ ಕಾರಣ…..

Suddi Sante Desk

ಜಬಲ್ಪುರ್ –

ಶಾಸಕರೊಬ್ಬರ ಪುತ್ರನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಬಲ್ ಪುರ್ ದಲ್ಲಿ ನಡೆದಿದೆ.ಕಾಂಗ್ರೆಸ್ ಶಾಸಕನ ಮಗ ಗುಂಡು ಹಾರಿಸಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ. ಮಧ್ಯ ಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ.16 ವರ್ಷದ ವೈಭವ್‌ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.ಈಗ ಜಬಲ್‌ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಜಯ್ ಯಾದವ್ ಅವರ ಮಗ.ದ್ವಿತೀಯ ಪಿಯುಸಿ ಓದುತ್ತಿದ್ದ ವೈಭವ್‌ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ.

ಸ್ನಾನದ ಕೋಣೆಗೆ ಹೋಗಿ ಈ ರೀತಿ ಮಾಡಿಕೊಂಡಿದ್ದಾನೆ. ಗುಂಡಿನ ಶಬ್ದ ಕೇಳುತ್ತಲೇ ಧಾವಿಸಿದ ಕುಟುಂಬಸ್ಥರು ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಿದರೂ ಆತ ಅದಾಗಲೇ ಪ್ರಾಣ ಕಳೆದುಕೊಂಡಿದ್ದ.ಇನ್ನೂ ಪ್ರಮುಖವಾಗಿ
ಆತ್ಮಹತ್ಯೆಯ ಮುನ್ನ ತನ್ನೆಲ್ಲಾ ಸ್ನೇಹಿತರಿಗೆ ಕರೆ ಮಾಡಿದ್ದ ವೈಭವ್‌.ಇಷ್ಟು ದಿನ ತನ್ನ ಜೊತೆಗೆ ಕಳೆದಿರುವುದಕ್ಕೆ ಹಾಗೂ ತನ್ನ ಸ್ನೇಹಿತರಾಗಿರುವುದಕ್ಕೆ ಧನ್ಯವಾದ ಹೇಳಿದ್ದಾನೆ.

ಕೊನೆಗೆ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.ಸಾವಿಗೆ ನಿಖರ ಕಾರಣ ಏನು ಎನ್ನುವುದು ಕುಟುಂಬಸ್ಥರಿಗೂ ತಿಳಿದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ‍ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.