ಧಾರವಾಡದಲ್ಲಿ ಕೊಲೆ – ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ ಸ್ಥಳಕ್ಕೇ ಗ್ರಾಮೀಣ ಪೊಲೀಸರು…..

Suddi Sante Desk

ಧಾರವಾಡ –

ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಧಾರವಾಡದ ಕವಲಗೇರಿ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಲಿನಿಂದ ಜಜ್ಜಿ ವ್ಯಕ್ತಿಯನ್ನು ಕೊಲೆ ಮಾಡಿದ್ದು ಗ್ರಾಮದ ಜಮೀನೊಂದರಲ್ಲಿ ನಡೆದಿದೆ.ಕವಲಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ

ಪ್ರಕಾಶ ದೇಶದ (48) ಕೊಲೆಯಾದ ವ್ಯಕ್ತಿಯಾಗಿದ್ದು ಧಾರವಾಡ ತಾಲೂಕು ಅಮ್ಮಿನಬಾವಿ ಗ್ರಾಮದ ನಿವಾಸಿ ಯಾಗಿದ್ದು ಬೆಳಗ್ಗೆ ಕೊಲೆ ನಡೆದಿರೋ ಶಂಕೆಯನ್ನು ವ್ಯಕ್ತಪ ಡಿಸಲಾಗಿದೆ.ಜಮೀನಿಗೆ ರೈತರು ಬಂದಾಗ ಈ ಒಂದು ಚಿತ್ರಣವು ಕಂಡು ಬಂದಿದ್ದು ಶವವನ್ನು ನೋಡಿದ ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.

https://youtu.be/VX7Yi7FQWkI

ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಈ ಕುರಿತಂತೆ ದೂರನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.