ಲಾರಿಗೆ ಬೈಕ್ ಡಿಕ್ಕಿ ನಾಗೇಶ್ ಕಲಬುರ್ಗಿ ಪುತ್ರ ಸಾವು ಹುಡಾ ಮಾಜಿ ಅಧ್ಯಕ್ಷರ ಮಗನನ್ನು ಬಲಿ ಪಡೆದ ಕಿಲ್ಲರ್ ಹೆದ್ದಾರಿ…..

Suddi Sante Desk

ಹುಬ್ಬಳ್ಳಿ –

ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಪುತ್ರ ಸಾವಿಗೀಡಾದ ಘಟನೆ ಹುಬ್ಬಳ್ಳಿ ಯಲ್ಲಿ ನಡೆದಿದೆ.ಹೌದು ತಾರಿಹಾಳ ಬೈಪಾಸ್ ಬಳಿ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ತಡರಾತ್ರಿ ಈ ಒಂದು ಘಟನೆ ನಡೆದಿದೆ

ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಅವರ ಪುತ್ರ ತಿಲಕ ಕಲಬುರ್ಗಿ (22) ಮೃತ ದುರ್ದೈವಿಯಾಗಿದ್ದಾರೆ ನುಗ್ಗಿಕೇರಿ ಹನುಮಾನ್ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮವಾಗಿ ತಿಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು ಆತನ ಸ್ನೇಹಿತನಿಗೆ ಗಂಭೀರ ಗಾಯಗಳಾಗಿವೆ.

ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿ ಕೊಂಡು ಮುಂದಿ‌ನ ಕ್ರಮಗಳನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.