ನಮ್ಮ ಪಕ್ಷದಲ್ಲಿ ಯಾವುದೇ ಸಹಿ ಸಂಗ್ರಹ, ಒತ್ತಡಗಳಿಗೆ ಆಸ್ಪದವಿಲ್ಲ: ನಳೀನಕುಮಾರ್ ಕಟೀಲ…!

Suddi Sante Desk

ಹುಬ್ಬಳ್ಳಿ –

ಬಿ.ಎಸ್.ವೈ ಪರ ಸಹಿ ಸಂಗ್ರಹ ಮಾಡಿರುವಂತ ಯಾವುದೇ ಪ್ರಸಂಗಗಳು ಬಿಜೆಪಿಯಲ್ಲಿ ನಡೆದಿಲ್ಲ. ನಮ್ಮ ಪಾರ್ಟಿಯಲ್ಲಿ ಸಹಿ ಸಂಗ್ರಹ,ಒತ್ತಡ ಒತ್ತಾಯ
ಅಂತ ವಿಷಯಗಳಿಗೆ ಆಸ್ಪದವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು

ಯಡಿಯೂರಪ್ಪ ಪರ ಸಹಿ ಬಗ್ಗೆ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮದು ಶಾಸನ ಬದ್ಧ ಪಾರ್ಟಿಯಾಗಿದೆ. ನಮ್ಮ ಪಕ್ಷದಲ್ಲಿ ಯಾವುದೇ ಸಹಿ ಸಂಗ್ರಹ ನಡೆದಿಲ್ಲ ಎಂದರು.

ರಾಷ್ಟ್ರೀಯ ನಾಯಕರು, ಹೈಕಮಾಂಡ ಏನ್ ಸೂಚಿಸುತ್ತದೆಯೋ ಅದನ್ನು ಪಾಲನೆ ಮಾಡುವ ಪಕ್ಷ.ಅದನ್ನೇ ನಿನ್ನೆ ಸಿಎಂ ಚೆನ್ನಾಗಿ ಹೇಳಿದ್ದಾರೆ. ರಾಷ್ಟ್ರೀಯ ನಾಯಕರು ಏನು ಹೇಳ್ತಾರೆ ಅದರ ಮೇಲೆ ನನ್ನ ಕೆಲಸ ಅಂದಿದ್ದಾರೆ.ಅದನ್ನು ಪಕ್ಷದ ಕಾರ್ಯಕರ್ತರು, ನಾಯಕರು,ಶಾಸಕರು ಅರ್ಥ ಮಾಡಿಕೊಳ್ಳಬೇಕು.ಹೀಗಾಗಿ ಇಲ್ಲಿ ಸಹಿ ಸಂಗ್ರಹ ಅವಶ್ಯಕತೆ ಇಲ್ಲ.ನಾನು ಮಾಧ್ಯಮಗಳಲ್ಲಿ ನೋಡಿ ದ್ದೇನೆ.ಯಾರಾದರು ಇಂತಹ ಕೆಲಸಕ್ಕೆ ಮುಂದಾದರೇ ಅವರನ್ನು ಕರೆದು ಮಾತನಾಡುತ್ತೇನೆ ಎಂದರು

ಶಾಸಕರು ಯಾರು ಅವರವರ ಕ್ಷೇತ್ರ ಬಿಟ್ಟು ತೆರಳ ಬಾರದು.ಕೊರೋನಾ ನಿಯಂತ್ರಣ ಕೆಲಸ ಮಾಡ ಬೇಕು.ಎಲ್ಲವನ್ನೂ ಪಾರ್ಟಿ ಗಮನಿಸುತ್ತಿದೆ.ಇನ್ನೂ ಮುಂದೆ ಅನಿವಾರ್ಯ ಇದ್ದರೆ ಬೆಂಗಳೂರಿಗೆ ಹೋಗಲಿ.ಜನ ನಮಗೆ ಆಶಿರ್ವಾದ ಮಾಡಿದ್ದು ಜನಸೇವೆ ಮಾಡುವುದಕ್ಕೆ. ನಮ್ಮ ಪಕ್ಷದಲ್ಲಿ ಸರ್ವ ಸಮ್ಮತಿಯ ನಾಯಕ ಬಿ.ಎಸ್.ಯಡಿಯೂರಪ್ಪ. ಹೀಗಾಗೇ ಯಾವುದೇ ಚರ್ಚೆಗಳಿಲ್ಲ, ಸಿಎಂ ಹುದ್ದೆ ಖಾಲಿ ಇಲ್ಲ ಎಂದು ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.