ಬಿಸಿಯೂಟ ತಯಾರಕ ಸಿಬ್ಬಂದಿಗಳಿಗೆ ಹೊಸ ಮಾರ್ಗಸೂಚಿಗಳು ಪ್ರಕಟ – ಮಹಿಳೆಯರಿಗೆ ಬಳೆ ಬ್ಯಾನ್ ಶಾಕ್ ಆದ ಅಡುಗೆ ತಯಾರಕ ಸಿಬ್ಬಂದಿ…..

Suddi Sante Desk
ಬಿಸಿಯೂಟ ತಯಾರಕ ಸಿಬ್ಬಂದಿಗಳಿಗೆ ಹೊಸ ಮಾರ್ಗಸೂಚಿಗಳು ಪ್ರಕಟ – ಮಹಿಳೆಯರಿಗೆ ಬಳೆ ಬ್ಯಾನ್ ಶಾಕ್ ಆದ ಅಡುಗೆ ತಯಾರಕ ಸಿಬ್ಬಂದಿ…..

ಬೆಂಗಳೂರು

ರಾಜ್ಯದಲ್ಲಿ ಶಾಲೆಗಳು ಆರಂಭದ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಬಿಸಿಯೂಟ ಅಡುಗೆ ಸಿಬ್ಬಂದಿ’ಗೆ ಕೆಲವೊಂದಿಷ್ಟು ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಲಾಗಿದೆ ಹೌದು ಶಿಕ್ಷಣ ಇಲಾಖೆ’ಯಿಂದ ಹೊಸದಾಗಿ ಮಾರ್ಗಸೂಚಿಗಳನ್ನು ಪ್ರಕಟ ಮಾಡಲಾಗಿದ್ದು ಈ ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ.

ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸ ಲಾಗಿದೆ. ಪ್ರಮುಖವಾಗಿ ಏಪ್ರಾನ್,ತಲೆಗವಸು, ಕೈಗವರು ಧರಿಸಲು ಸೂಚಿಸಿದೆ.

ಅಲ್ಲದೇ ವಿವಾದಕ್ಕೀಡು ಮಾಡುವಂತೆ ಅಡುಗೆ ಸಿಬ್ಬಂದಿಗಳು ಬಳೆ ತೊಡದಂತೆ ಸೂಚಿಸ ಲಾಗಿದೆ.ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ,ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸ ಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿ ರುವಂತ ಮಾರ್ಗಸೂಚಿಯಲ್ಲಿ ಅಡುಗೆ ಸಿಬ್ಬಂದಿ ಏಪ್ರಾನ್, ತಲೆಗವಸು ಮತ್ತು ಕೈಗವಸುಗಳನ್ನು ಧರಿಸಬೇಕು.ಕೈಗಳಲ್ಲಿ ಬಳೆಗಳನ್ನು ತೊಟ್ಟಿರಬಾ ರದು ಎಂಬುದಾಗಿ ಸೂಚಿಸಲಾಗಿದೆ.ಇದು ಮಹಿಳೆಯರ ಅಸಮಾಧಾನಕ್ಕೂ ಕಾರಣವಾಗಿದೆ.

ಇದಲ್ಲದೇ ಅಡುಗೆ ಕೋಣೆ ಸ್ವಚ್ಛ ಹಾಗೂ ಧೂಳು ರಹಿತವಾಗಿ ಇರುವಂತೆ ನೋಡಿಕೊಳ್ಳಬೇಕು. ಶುದ್ಧ ನೀರಿನಲ್ಲಿ ಪಾತ್ರೆ ಪರಿಕರಗಳನ್ನು ತೊಳೆ ಯಬೇಕು. ಗೋಡೆ, ಕಿಟಕಿಗಳಲ್ಲಿ ಹಲ್ಲಿ, ಜೇಡ, ಜಿರಲೆ, ನೋಣಗಳಿಂದ ಮುಕ್ತವಾಗಿರಬೇಕು.

ಆಹಾರ ಧಾನ್ಯಗಳಲ್ಲಿ ಕ್ರಿಮಿ, ಕೀಟಗಳು ಇಲ್ಲದಿ ರುವುದನ್ನು ನೋಡಿಕೊಂಡು ಅಡುಗೆಗೆ ಬಳಕೆ ಮಾಡುವಂತೆ ತಿಳಿಸಲಾಗಿದೆ.ಇನ್ನೂ ಸಿದ್ಧಪಡಿಸಿದ ಆಹಾರದ ಪಾತ್ರೆಗಳನ್ನು ಸುರಕ್ಷಿತವಾಗಿ ಮುಚ್ಚಿ ಡಬೇಕು. ಹಸಿ ಸೊಪ್ಪು ತರಕಾರಿಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆದು ಸಾಂಬಾರ್ ಮಾಡಬೇಕು. ಸಿದ್ಧಪಡಿಸಿದ ಆಹಾರ ವಿತರಿಸೋ ಮುನ್ನ ಶುಚಿ-ರುಚಿ ಪರೀಕ್ಷಿಸಿ ಭಿಪ್ರಾಯ ದಾಖಲಿಸುವಂತೆಯೂ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.