LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಓದುವ ಬೆಳಕು ಕಾರ್ಯಕ್ರಮ ಆರಂಭ – ಶಿಕ್ಷಕರ ಜೋಳಿಗೆಗೆ ಬಂದವು ಸಾವಿರಾರು ಪುಸ್ತಕಗಳು

ಧಾರವಾಡ -

ಧಾರವಾಡದಲ್ಲಿ ಶಿಕ್ಷಣ ಇಲಾಖೆಯಲ್ಲಿ ಮತ್ತೊಂದು ಹೊಸ ಕಾರ್ಯಕ್ರಮ ಆರಂಭವಾಗಿದೆ. ಶಿಕ್ಷಕರ ಹೊಸ ಪ್ರಯತ್ನದ ಮತ್ತು ಯೋಜನೆಯ ಒಂದು ಕಾರ್ಯಕ್ರಮ ಇದಾಗಿದೆ. ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತನ CEO

ಸಹಕಾರದೊಂದಿಗೆ ಧಾರವಾಡದಲ್ಲಿ ಇಂದಿನಿಂದ ಓದುವ ಬೆಳಕು ಕಾರ್ಯಕ್ರಮವನ್ನು ಆರಂಭ ಮಾಡಿದ್ದಾರೆ.ಧಾರವಾಡದಲ್ಲಿ ಓದುವ ಬೆಳಕು ಕಾರ್ಯಕ್ರಮಕ್ಕೆ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮೋಹನಕುಮಾರ ಹಂಚಾಟೆ ಅವರು ಚಾಲನೆ ನೀಡಿದರು. ನಂತರ ತಮ್ಮ ಮನೆಯಲ್ಲಿದ್ದ ನಾಲ್ಕು ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಿಕ್ಷಕರ ಕೈಗೆ ಹಸ್ತಾಂತರಿಸಿದ್ರು. ಇದೇ ವೇಳೆ ಕಾರ್ಯಕ್ರಮದ ಉದ್ದಕ್ಕೂ ಸಾಕಷ್ಟು ಶಿಕ್ಷಣ ಪ್ರೇಮಿಗಳು ಉತ್ಸಾಹಿ ನಿವೃತ್ತ ಶಿಕ್ಷಕರು ಸೇರಿದಂತೆ ಹಲವರು ಶಿಕ್ಷಕರಿಗೆ ಸಾಕಷ್ಟು ಪ್ರಮಾಣದಲ್ಲಿ ಪುಸ್ತಕಗಳನ್ನು ನೀಡಿದ್ರು.

ಒಂದೇ ದಿನ ಒಂದು ಸಾವಿರಕ್ಕೂ ಹೆಚ್ಚು ಪುಸ್ತಕಗಳು ಶಿಕ್ಷಕರ ಕೈ ತಲುಪಿದ್ದು ಇನ್ನೂ ಹೆಚ್ಚು ಹೆಚ್ಚು ಪುಸ್ತಕಗಳನ್ನು ಕೊಡುವುದಾಗಿ ಹೇಳಿದ್ದಾರೆ. ಇನ್ನೂ ವಿಶೇಷವಾದ ಈ ಒಂದು ಕಾರ್ಯಕ್ರಮದಲ್ಲಿ ಧಾರವಾಡ ಗ್ರಾಮೀಣ ಬಿಇಒ ಉಮೇಶ ಬೊಮ್ಮಕ್ಕನವರ ಮಕ್ಕಳ ಸಾಹಿತಿ ಶಂಕರ ಹಲಗತ್ತಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಿ ಎನ್ ಕೀರ್ತಿವತಿ, ಆರ್ ಎಂ ಕುರ್ಲಿ, ಕಮಲಾ ಹೊರಟ್ಟಿ , ಮಕ್ಕಳ ಸಾಹಿತಿ ಶಂಕರ ಹಲಗತ್ತಿ ,ಎಲ್ ಐ ಲಕ್ಕಮ್ಮನವರ,

ಹನಗಾ ಘೋಡಕಿಂಡಿ , ರಾಘವೇಂದ್ರ ಬಡಿಗೇರ ,ಅರುಣ ನವಲೂರು, ಸಿದ್ದು ವಾರದ ,ವಿ ಎನ್ ಮಡಿವಾಳರ, ಎಮ್ ಎಮ್ ಮುಲ್ಲಾನವರ ಸೇರಿದಂತೆ ಹಲವು ಶಿಕ್ಷಕ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....