LIVE TV LocalCrimeNationalInternationalPoliticsEducationTechnologyEntertainmentSportsFeature
State News

ಧಾರವಾಡದಲ್ಲಿ ರೈತ ದಿನಾಚರಣೆ - ರೈತಮೋರ್ಚಾ,ಹಾಗೂ ಮಹಿಳಾ ಮೋರ್ಚಾ ಸಂಘಟನೆಗಳ ನೇತೃತ್ವದಲ್ಲಿ ರಾಷ್ಟ್ರೀಯ ವಿಶೇಷ ರೈತ ದಿನಾಚರಣೆ

ಧಾರವಾಡ -
ರಾಷ್ಟ್ರೀಯ ರೈತ ದಿನಾಚರಣೆಯನ್ನು ಧಾರವಾಡದಲ್ಲೂ ಆಚರಣೆ ಮಾಡಲಾಯಿತು. ರೈತಮೋರ್ಚಾ,ಹಾಗೂ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಈ ಒಂದು ರಾಷ್ಟ್ರೀಯ ರೈತ ದಿನಾಚರಣೆಯನ್ನು ಆಚರಿಸಲಾಯಿತು.ರಾಜ್ಯ ರೈತಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಅರವಿಂದ ಏಗನಗೌಡರ ಹಾಗೂ ಮಹಿಳಾಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಸೀಮಾ ಮಸೂತಿ ಇವರ ಸುಮ್ಮುಖದಲ್ಲಿ ಈ ಒಂದು ಕಾರ್ಯಕ್ರಮ ನಡೆಯಿತು.

ರೈತಮಹಿಳೆಯರು ಹಾಗೂ ಹಿರಿಯ ರೈತರಿಗೆ ಸನ್ಮಾನಿಸಲಾಯಿತು. ಇದೇ ವೇಳೆ ಅರವಿಂದ ಏಗನಗೌಡರ ಮಾತನಾಡಿ ದೇಶದ ಐದನೇಯ ಅಂತರಾಷ್ಟ್ರೀಯ ದಿನಾಚರಣೆಯನ್ನು ಹಿರಿಯರು,ಮಾಜಿ ಪ್ರಧಾನಿಗಳಾದ ಶ್ರೀ ಚೌಧರಿ ಚರಣಸಿಂಗರವರ,ಹುಟ್ಟು ಹಬ್ಬದ ಅಂಗವಾಗಿ ಆಚರಿಸಲಾಗುತ್ತಿದ್ದು,ರೈತಪರ,ರೈತರ ಹಿತದೃಷ್ಠಿಯಿಂದ ,ಜಮೀನ್ದಾರಿಪದ್ದತಿ ಹೋಗಲಾಡಿಸುವ ನಿಟ್ಟಿನಲ್ಲಿ ಹಾಗೂ ದಳ್ಳಾಳಿಗಳ ಕಾಟ ತಪ್ಪಿಸಿ ರೈತರನ್ನು ಉಳಿಸಿಬೆಳೆಸಬೇಕೆಂಬ ಸಂಕಲ್ಪ ಹೊಂದಲಾಗಿದೆ ಎಂದರು.

ಇನ್ನೂ ಎಪಿಎಮ್ ಸಿ ಕಾಯ್ದೆಯನ್ನ ಜಾರಿಗೆ ತಂದು,ಊಳುವವನೆ ಒಡೆಯ ಎಂಬ ಕಾನೂನು ಚಾಲನೆಗೊಳಿಸಿ,ರೈತರ ಬಾಳು ಹಸನು ಮಾಡಿದ ಮಹನೀಯರು ಶ್ರೀ ಚರಣಸಿಂಗರವರು,ಹಸಿರು ಕ್ರಾಂತಿಯ ಕಾಲದಲ್ಲಿಯೇ ಇಂತಹ ದಿಟ್ಟ ನಿರ್ಧಾರ ಕೈಗೊಂಡ ಮಹಾನರ ಹುಟ್ಟುಹಬ್ಬವನ್ನು ರಾಷ್ಟ್ರೀಯ ರೈತ ದಿನಾಚರಣೆಯಾಗಿ ಆಚರಿಸುವಂತಾಗಿದ್ದು ನಮ್ಮ ಪುಣ್ಯ ಎಂದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಾಜಿ ಶಾಸಕಿ ಸೀಮಾ ಮಸೂತಿಯವರು ಮಾತನಾಡಿ ರೈತಪರ ಕೇಂದ್ರ,ಹಾಗೂ ರಾಜ್ಯ ಸರ್ಕಾರಗಳಿಗೆ ಕಳಂಕ ತರುವ ಕ್ಷುಲ್ಲಕ ರಾಜಕಾರಣ ಮಾಡುತ್ತಿರುವ ವಿರೋದಿಗಳು,ನರೇಂದ್ರ ಮೋದೀಜಿಯವರ ವಿರುದ್ದ ಷಡ್ಯಂತ್ರ ಮಾಡುತ್ತಿದ್ದು ರೈತರು ಎಚ್ಚೆತ್ತುಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂಧರ್ಭದಲ್ಲಿ,ರಾಜ್ಯ ನಾಯಕರುಗಳಾದ ಅರವಿಂದ ಏಗನಗೌಡರ,ಸೀಮಾ ಮಸೂತಿ, ಮಂಡಳ ಅಧ್ಯಕ್ಷರಾದ ಸುನೀಲ ಮೋರೆ, ರೈತಮೋರ್ಚಾ ಅಧ್ಯಕ್ಷ ಜಗು ಚಿಕ್ಕಮಠ,ಮಹಿಳಾ ಮೋರ್ಚಾ ಅಧ್ಯಕ್ಷರಾದ ರಾಜೇಶ್ವರಿ ಅಳಗವಾಡಿ,ರೇಣುಕಾ ಕೋಳೇಕರ,ಪುಷ್ಪಾ ನವಲಗುಂದ,ಮಹಾದೇವಿ ಕೌದಿ,ಲಕ್ಷ್ಮಿ ಕೇರಿಮಠ,ನಾಗರಾಜ ಗಾಣಿಗೇರ,ಶ್ರೀನಿವಾಸ ಕೋಟ್ಯಾಣ,ಹರೀಶ ಬಿಜಾಪೂರ,ಶ್ರೀಧರ ಚಂದರಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....