LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನನ್ನನ್ನು ವರ್ಗಾವಣೆ ಮಾಡಿದ ಕಾಣದ ಕೈಗಳಿಗೆ ,ಷಡ್ಯಂತ್ರ ರೂಪಿಸಿದವರಿಗೆ ಸಂವಿಧಾನ ವಿರೋಧಿಯ ವ್ಯಕ್ತಿಗೆ ಧನ್ಯವಾದಗಳೆಂದು ಅಧಿಕಾರ ಹಸ್ತಾಂತರಿಸಿದ ಅಧಿಕಾರಿ

ಧಾರವಾಡ -

ಧಾರವಾಡ ಸಾರ್ವಜನಿಕರ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ನಿರ್ದೇಶಕರಾಗಿದ್ದ ಬಿಕೆಎಸ್ ವರ್ಧನ್ ವರ್ಗಾವಣೆಯಾಗಿದ್ದಾರೆ. 9-7-2020 ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ವರ್ಧನ್ ರನ್ನು ಧಾರವಾಡ ಆಯುಕ್ತಾಲಯದಿಂದ ಗುಲ್ಬರ್ಗಾ ಆಯುಕ್ತಾಲಯಕ್ಕೇ ವರ್ಗಾವಣೆ ಮಾಡಿ ಆದೇಶ ಮಾಡಿದೆ. ವರ್ಗಾವಣೆ ಆದೇಶ ಬರುತ್ತಿದ್ದಂತೆ ಕಚೇರಿಯಲ್ಲಿ ತಮ್ಮ ಅಧಿಕಾರವನ್ನು ನಿಯೋಜನೆಗೊಂಡ ಅಧಿಕಾರಿಗೆ ಅಧಿಕಾರವನ್ನು ಹಸ್ತಾಂತರ ಮಾಡಿ ನಿರ್ಗಮಿಸಿದ್ರು. ಇದು ಇರಲಿ ಬಿಡಿ ಇದಕ್ಕಿಂತ ಮುಖ್ಯವಾದ ಇಂಟ್ರಸ್ಟಿಂಗ್ ಕಹಾನಿ ಏನೆಂದರೆ ಅಧಿಕಾರ ವಹಿಸಿಕೊಂಡ ದಿನದಿಂದ ಈವರೆಗೆ ಹಿರಿಯ ಅಧಿಕಾರಿಯೊಂದಿಗೆ ಮುಸುಕಿನ ಗುದ್ದಾಟವನ್ನು ಇವರು ಮಾಡುತ್ತಿದ್ದರು. ನಿರ್ದೇಶಕರಾಗಿ ಯಾವಾಗ ಅಧಿಕಾರವನ್ನು ವಹಿಸಿಕೊಂಡ್ರೊ ಅಂದಿನಿಂದ ಈವರೆಗೆ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಂದಿಗೆ ಮುಸುಕಿನ ಗುದ್ದಾಟ ನಡೆದಿತ್ತು.

ಇವರ ಮತ್ತು ಹಿರಿಯ ಅಧಿಕಾರಿಯೊಬ್ಬರ ಮುಸುಕಿನ ಗುದ್ದಾಟ ತಿಕ್ಕಾಟಕ್ಕೇ ವರ್ಧನ್ ಸಾಹೇಬ್ರು ಬಲಿಯಾಗಿ ವರ್ಗಾವಣೆಯಾಗಿದ್ದಾರೆ. ಇನ್ನೂ ಅಧಿಕಾರ ಹಸ್ತಾಂತರದ ಕೊನೆಯ ದಿನ ಮತ್ತೇ ಆ ಹಿರಿಯ ಅಧಿಕಾರಿಯ ವಿರುದ್ದ ಗುಡುಗಿದ್ದಾರೆ ಅಲ್ಲದೇ ಅಧಿಕಾರ ಹಸ್ತಾಂತರದ ದಿನವೂ ಮತ್ತೆ ಗುಡುಗಿ ತಮ್ಮ ಅಧಿಕಾರವನ್ನು ಹಸ್ತಾಂತರ ಮಾಡಿ ನಿರ್ಗಮಿಸಿದ್ದಾರೆ.ಇಂದು ಸರ್ಕಾರದ ಆದೇಶದ ಅನುಸಾರ ಧಾರವಾಡ ಆಯುಕ್ತಾಲಯದಿಂದ ಗುಲ್ಬರ್ಗಾ ಆಯುಕ್ತಾಲಯಕ್ಕೆ ವರ್ಗಾವಣೆಯಾದ ನಿಮಿತ್ತ ಸ್ಥಳ ನಿಯುಕ್ತಿಗೊಂಡು ಬಂದಿರುವ ಅಧಿಕಾರಿ ಸಹೋದರಿಗೆ ಇದೀಗ ನಿರ್ದೇಶಕ ಹುದ್ದೆಯ ಪ್ರಭಾರವನ್ನು ಅವರಿಗೆ ವಹಿಸಿರುತ್ತೇನೆ.ಸಂವಿಧಾನ ವಿರೋಧಿಯ ಸಾಮೀಪ್ಯ ದಿಂದ ಸದ್ಯಕ್ಕೆ ಮುಕ್ತಗೊಳಿಸಿದ ಸರ್ಕಾರಕ್ಕೆ, ಇದಕ್ಕೆ ಷಡ್ಯಂತ್ರ ರೂಪಿಸಿದ ಕಾಣದ ಕೈಗಳಿಗೆ ಹೃತ್ಪೂರ್ವಕ ಧನ್ಯವಾದಗಳು.

ಈ ಹುದ್ದೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ನನಗೆ ಸಹಾಯ, ಸಹಕಾರ ನೀಡಿದ ಶಿಕ್ಷಣ ಇಲಾಖೆಯ ನನ್ನ ಎಲ್ಲ ಶಿಕ್ಷಕ ಬಂಧು ಬಳಗಕ್ಕೆ,ಸಿಬ್ಬಂದಿ,ಅಧಿಕಾರಿ ಸಹೋದರ, ಸಹೋದರಿಯರಿಗೆ, ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ನನ್ನ ಅನಂತ ವ೦ದನೆಗಳು. ಈಗಾಗಲೇ ಹಲವಾರು ಸಂದರ್ಭಗಳಲ್ಲಿ ನನ್ನ ಭಾವನೆಗಳಿಗೆ ತಾವೆಲ್ಲರೂ ಸ್ಪಂದನೆ ನೀಡಿದ್ದೀರಿ.ಈ ವ್ಯವಸ್ಥೆಯ ಮಿತಿಯೇ ಇಷ್ಟು. ಇನ್ನೂ ಆರು ವರ್ಷ ಸೇವೆ ಸಲ್ಲಿಸುವ ಅವಕಾಶವಿದೆ ತಮ್ಮೆಲ್ಲರ ಹಾರೈಕೆ ಇದೇ ರೀತಿ ಇರಲಿ. ನಮಗೆ ಎಷ್ಟೇ ತೊಂದರೆ ಬಂದರೂ ಸಂವಿಧಾನ ಉಳಿಸಿಕೊಳ್ಳಲು ನಾವಿರುವ ಪರಿಸರದಲ್ಲಿ ನಾವು ಧ್ವನಿ ಎತ್ತುತ್ತಲೇ ಇರಬೇಕಾಗುತ್ತದೆ. ಭಾರತದ ಪ್ರಜೆಯಾಗಿ ಅದು ನಮ್ಮ ನಾಗರಿಕ ಹೊಣೆಗಾರಿಕೆಯೂ ಹೌದು. ಸಂವಿಧಾನಕ್ಕೆ ಜಯವಾಗಲಿ, ಸಾಮಾಜಿಕ ನ್ಯಾಯ ಸಿಗದಿದ್ದರೂ ಪರವಾಗಿಲ್ಲ, ನೈಸರ್ಗಿಕ ನ್ಯಾಯ ನನಗೆ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವಿದೆ ಎಲ್ಲರಿಗೂ ಒಳ್ಳೆಯದಾಗಲಿ. ಹೀಗೆ ಸಾಮಾಜಿಕ ಜಾಲ ತಾಣಗಳಲ್ಲಿ ಬರೆದುಕೊಂಡು ಪೊಸ್ಟ್ ಮಾಡಿ ನಿರ್ಗಮಿಸಿ ಹಿರಿಯ ಅಧಿಕಾರಿಯೊಬ್ಬರ ವಿರುದ್ದ ಮತ್ತೇ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ.ಇತ್ತ ಸಾಮಾಜಿಕ ಜಾಲ ತಾಣಗಳಲ್ಲಿ ಅಪರ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ವಿರುದ್ಧ ಕೆಲವರು ಕಿಡಿಕಾರಿದ್ದಾರೆ‌.ಕಳೆದ ಹಲವಾರು ವರುಷಗಳಿಂದ ಜಾತಿಯತೆ ಮಾಡ್ರಾ ದಬ್ಬಾಳಿಕೆ ಮಾಡ್ತಿದ್ದಿರಾ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....