ಬೆಂಗಳೂರು -
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5 ರಂದು 'ಶಿಕ್ಷಕರ ದಿನಾಚರಣೆ' ಆಚರಿಸಲು ಸರ್ಕಾರ ಆದೇಶ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದು ಮಧ್ಯಾಹ್ನದ ವೇಳೆಗೆ 'ಶಿಕ್ಷಕರ ದಿನಾಚರಣೆ' ಕಾರ್ಯ ಕ್ರಮವನ್ನು ಹಮ್ಮಿಕೊಳ್ಳುವಂತೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದೆ.ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗ ಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಸೆಪ್ಟೆಂಬರ್ 5ರಂದು ರಾಜ್ಯಾದ್ಯಂತ 'ಪ್ರಜಾಸೇವಾ ಆಂದೋಲನ' ಆರಂಭವಾಗಲಿದ್ದು, ಕಾರ್ಯಕ್ರಮ ಗಳು ಸುಲಲಿತವಾಗಿ ನಡೆಯುವ ನಿಟ್ಟಿನಲ್ಲಿ ಸಮಯ ನಿಗದಿಪಡಿಸಲಾಗಿದೆ.ಅಂದು ಬೆಳಗ್ಗೆ 11:00 ಗಂಟೆಗೆ ಪ್ರಜಾಸೇವಾ ಅಭಿಯಾನದ ಸಭೆಗಳು ಆರಂಭ ಗೊಂಡು ಅಪರಾಹ್ನ 3:00 ಗಂಟೆಗೆ ಮುಕ್ತಾಯ ಗೊಳ್ಳಲಿವೆ. ಇದಾದ ಬಳಿಕ ಮಧ್ಯಾಹ್ನದ ಅವಧಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸು ವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.
ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಬಾಗ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಎಲ್ಲ ಜಿಲ್ಲೆಗಳಲ್ಲೂ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಸಿದ್ಧತೆ ಕೈಗೊಳ್ಳಲು ಸೂಚಿಸ ಲಾಗಿದೆ.ಅಂದು ಬೆಳಗ್ಗೆ 11:00 ಗಂಟೆಗೆ ಪ್ರಜಾಸೇವಾ ಅಭಿಯಾನದ ಸಭೆಗಳು ಆರಂಭಗೊಂಡು ಅಪರಾಹ್ನ 3:00 ಗಂಟೆಗೆ ಮುಕ್ತಾಯಗೊಳ್ಳಲಿವೆ. ಇದಾದ ಬಳಿಕ ಮಧ್ಯಾಹ್ನದ ಅವಧಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸುವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.
ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಎಲ್ಲ ಜಿಲ್ಲೆಗಳಲ್ಲೂ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಸಿದ್ಧತೆ ಕೈಗೊಳ್ಳಲು ಸೂಚಿಸ ಲಾಗಿದೆ.