LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲಾ ಸಮಯ ಬದಲಾವಣೆ..... ಮಾಹಿತಿ ನೀಡಿದ ಶಿಕ್ಷಣ ಸಚಿವರು.....

ಬೆಂಗಳೂರು -

 

ರಾಜ್ಯದಲ್ಲಿನ ಶಾಲೆಗಳ ಸಮಯವನ್ನು ಬದಲಾವಣೆ ಮಾಡುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತೀವ್ರ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಗರದ ಶಾಲೆ ಗಳ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದು ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಸಮಯವನ್ನು ಪರಿಷ್ಕರಿಸು ವಂತೆ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಸಾರ್ವಜ ನಿಕರಿಂದ ಮನವಿಗಳು ಬಂದಿವೆ ಎಂದರು

ಶಾಲಾ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ವಿವಿಧ ಇಲಾಖೆಗಳು ಸಂಚಾರ ಪೊಲೀಸ್ ಅಧಿಕಾರಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಶಾಲಾ ವಾಹನ ಚಾಲಕರ ಸಂಘ ಮತ್ತು ಪೋಷಕರೊಂದಿಗೆ ಸುದೀರ್ಘ ಚರ್ಚೆ ನಡೆಸಲಿದೆ ಎಲ್ಲ ಭಾಗಿದಾರ ಅಭಿಪ್ರಾಯಗಳನ್ನು ಸಂಗ್ರಹಿಸಿದ ನಂತರವೇ ಸೂಕ್ತ ಹಾಗೂ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರ ರಾಜಧಾನಿಯಂತೆಯೇ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಮತ್ತು ರಾಜ್ಯದ ಇತರ ಪ್ರಮುಖ ನಗರ ಪಟ್ಟಣಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಶಾಲಾ ವಾಹನಗಳು ಹಾಗೂ ಕಚೇರಿ ವಾಹನಗಳು ಒಂದೇ ಸಮಯದಲ್ಲಿ ರಸ್ತೆಗೆ ಇಳಿಯುವುದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಹಿಂದೆ ಉಚ್ಚ ನ್ಯಾಯಾಲಯ ಕೂಡ ಸಂಚಾರ ನಿಯಂತ್ರಣಕ್ಕಾಗಿ ಶಾಲಾ ಮತ್ತು ಕಚೇರಿ ವೇಳಾಪಟ್ಟಿಯಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸರ್ಕಾರಕ್ಕೆ ಸಲಹೆ ನೀಡಿತ್ತು.

ಶಾಲಾ ಸಮಯವನ್ನು ಸುಮಾರು 30 ನಿಮಿಷದಿಂದ 1 ಗಂಟೆಗಳ ಕಾಲ ಮುಂಚಿತವಾಗಿ ಅಥವಾ ಬದಲಾ ಯಿಸಿ ನಿಗದಿಪಡಿಸುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ಹೆಚ್ಚುವುದರ ಜೊತೆಗೆ ರಸ್ತೆಗಳಲ್ಲಿ ವಾಹನ ಗಳ ಒತ್ತಡ ಕಡಿಮೆಯಾಗಲಿದೆ ಎಂಬುದು ಇಲಾಖೆಯ ಲೆಕ್ಕಾಚಾರವಾಗಿದ್ದು ಶೀಘ್ರದಲ್ಲೇ ಈ ಒಂದು ಕುರಿತು ಇಲಾಖೆ ಸ್ಪಷ್ಟವಾಗಿ ಸೂಕ್ತವಾದ ಆದೇಶ ಮಾಡಲಿದೆ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು......

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಮಯ ಬದಲಾವಣೆ..... ಮಾಹಿತಿ ನೀಡಿದ ಶಿಕ್ಷಣ ಸಚಿವರು.....ರಾಷ್ಟ್ರ ಮಟ್ಟದ ಉತ್ತಮ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಸ್ತಿಗೆ ಭಾಜನರದ BEO ಗೆ ಅಭಿನಂದಿಸಿದ KSPSTA.....NPS ಮತ್ತು OPS ನಡುವಿನ ವ್ಯತ್ಯಾಸವೇನು.....ನಿಮಗಾಗಿ ಒಂದಿಷ್ಟು ಮಾಹಿತಿ.....ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ.....ಸುಳಿವು ನೀಡಿದ ಸಚಿವರು.....ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ತಲೆಬಿಸಿ ಹೆಚ್ವಿಸಿದ ಶನಿವಾರದ ಫುಲ್‌ಡೇ ಕ್ಲಾಸ್.....ಮಕ್ಕಳಿಗೆ ಹೊರೆ, ಶಿಕ್ಷಕರಿಗೆ ತಲೆಬಿಸಿ.....ಒಂದೇ ದಿನ ಇಬ್ಬರು ಸರ್ಕಾರಿ ಅಧಿಕಾರಿಗಳು ಹೃದಯಾಘಾತದಿಂದ ಸಾವು.....ಹೆಚ್ಚಾಗುತ್ತಿದೆ ಹೃದಯಾಘಾತದ ಸಂಖ್ಯೆ.....ಶಿಕ್ಷಕರ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ.....3K ತೆಗೆದುಕೊಳ್ಳುವಾಗ ಲಾಕ್.....15 ಜಿಲ್ಲೆಗಳ ಡಿಡಿಪಿಐ, ಬಿಇಒಗಳ ವಿರುದ್ಧ ದೂರು ದಾಖಲು.....ತನಿಖೆ ಶುರು.....ಶನಿವಾರ ಪೂರ್ಣ ತರಗತಿ ನಡೆಸಲು ಆದೇಶ.....ಆದೇಶ ಮಾಡಿದ DDPI.....