LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಗೆ ಪ್ರತಿಷ್ಠಿತ ಕಂಪನಿಗಳಿಂದ‌ - 6 ಸಾವಿರ ಕೋಟಿ ಬಂಡವಾಳ ಹೂಡಿಕೆ

ಹುಬ್ಬಳ್ಳಿ -

ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಮಹಾನಗರ ಪಾಲಿಕೆ ಅನುದಾನದಲ್ಲಿ ಉದಯನಗರದ ಶಿವ ಗಣೇಶ ದೇವಸ್ಥಾನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಭಾ ಭವನ ಉದ್ಘಾಟಿಸಿ ಅವರು ಮಾತನಾಡಿ ಬಂಡವಾಳ ಹೂಡಿಕೆಯಿಂದ ಐ.ಟಿ. ಮೆಕಾನಿಕಲ್ ಇಂಜಿನಿಯರಿಂಗ್, ಎಫ್.ಎಂ.ಜಿ.ಸಿ ಸೇರಿಯ ಹಲವು ವಿಭಾಗಗಳಲ್ಲಿ ಉದ್ಯೋಗ ಅವಕಾಶಗಳು ಸೃಷ್ಠಿಯಾಗಲಿವೆ. ಜಿಲ್ಲೆಯ 20 ರಿಂದ 30 ಸಾವಿರ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕಲಿದೆ. ಯುವಜನತೆ ಉದ್ಯೋಗ ಅರಿಸಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವುದು ತಪ್ಪಲಿದೆ ಎಂದರು.

ಇನ್ನೂ ಅವಳಿ ನಗರದಲ್ಲಿ ನಗರ ವಿಕಾಸ, ಸ್ಮಾರ್ಟ್ ಸಿಟಿ. ಲೋಕೋಪಯೋಗಿ ಸೇರಿದಂತೆ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಅವಳಿ ನಗರವನ್ನು ಸುಂದರ ಹಾಗೂ ಸುಸ್ಥಿರ ನಗರವನ್ನಾಗಿ ಮಾರ್ಪಡಿಸಲಾಗುವುದು. ನಗರದ ಪ್ರತಿಯೊಂದು ಬಡಾವಣೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಹುಬ್ಬಳ್ಳಿ ಧಾರವಾಡ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.
3 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.

ವಾರ್ಡ್ ನಂ 33 ರ ಮಯೂರಿ ಎಸ್ಟೇಟ್ ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು. ನಂತರ ಇಂದಿರಾ ನಗರ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದರು.ಒಟ್ಟು 3 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದರು.ಜಗದೀಶ್ ಶೆಟ್ಟರ್ ರೊಂದಿಗೆ ಮಾಜಿ ಮಹಾಪೌರ ವೀರಣ್ಣ ಸವಡಿ, ಮುಖಂಡರುಗಳಾದ ಮಲ್ಲಿಕಾರ್ಜುನ ಸಾಹುಕಾರ, ಸಂತೋಷ್ ಚವ್ಹಾಣ್ , ಲೋಕೋಪಯೋಗಿ ಇಲಾಖೆ ಹಿರಿಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....