LIVE TV LocalCrimeNationalInternationalPoliticsEducationTechnologyEntertainmentSportsFeature
State News

7ನೇ ವೇತನ ಆಯೋಗ ಸೇರಿದಂತೆ ನೌಕರರ ಬೇಡಿಕೆಗಳ ಕುರಿತು CM ಭೇಟಿಯಾದ ರಾಜ್ಯ ಸರ್ಕಾರಿ ನೌಕರರ ನಿಯೋಗ - ಷಡಾಕ್ಷರಿ ಅವರ ನೇತ್ರತ್ವದಲ್ಲಿನ ನಿಯೋಗಕ್ಕೆ CM ನೀಡಿದ ಭರವಸೆ ಏನು ನೋಡಿ.....

ಬೆಂಗಳೂರು -

7ನೇ ವೇತನ ಆಯೋಗ ಜಾರಿಗೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸೇರಿದಂತೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಗಳ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಯಾದರು.ಹೌದು ಸಂಘಟನೆಯ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ನೇತೃತ್ವದಲ್ಲಿನ ಟೀಮ್ ಭೇಟಿ ಯಾದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸೇರಿದಂತೆ
ಏಳನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕ ರಣೆ  ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ  ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

https://youtu.be/t1D5Foz18Hw?si=QLwm6ZxfFleEGPMo

ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ನಿಯೋಗ ಮನವಿ ಮಾಡಿತು.

ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆ ಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಿ, ಪಿಂಚ ಣಿಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸಲು ಆದೇಶಿಸಲು ನಿಯೋಗ ಕೋರಿಕೆ ಸಲ್ಲಿಸಿತು.

ತೀವ್ರತರವಾದ ಏಳು ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಮನವಿ ಮಾಡಿದರು.

https://youtu.be/t1D5Foz18Hw?si=QLwm6ZxfFleEGPMo

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಏಳನೇ ವೇತನ ಆಯೋಗದ ವರದಿ ಬಂದ ಬಳಿಕ ವೇತನ ಪರಿಷ್ಕರಣೆಯ ಬಗ್ಗೆ ಅಂತಿಮ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ವಿವಿಧ ಸರ್ಕಾರಿ ನೌಕರರ ಸಂಘದ ಪದಾಧಿ ಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...