LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎಸ್ಪಿ ಹನುಮಂತರಾಯ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ.

ದಾವಣಗೆರೆ -

ಈವರೆಗೆ ಅವರಿವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ವಂಚಕರು ಈಗ ದಾವಣಗೆರೆ ಎಸ್ಪಿ ಹನುಮಂತರಾಯ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ವಿಚಾರ ಈಗ ಬೆಳಕಿಗೆ ಬಂದಿದೆ.ಹೌದು ನಕಲಿ ಖಾತೆ ತೆರೆದು ದುಷ್ಕರ್ಮಿಗಳಿಂದ ವಂಚನೆ ಯತ್ನ ನಡೆದಿರುವುದು ಈಗ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ಹನುಮಂತರಾಯ ಹೊಸಪೇಟೆ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಕ್ರಿಯೇಟ್ ಮಾಡಿ ಅವರಿವರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಅದರಲ್ಲಿ ಎಸ್ಪಿ ಅವರು ಸ್ಟೈಲಿಸ್ ಭಾವಚಿತ್ರವನ್ನ ಹಾಕಿ ಪೋಸ್ಟ್ ಮಾಡಲಾಗಿದೆ.ಈಗಾಗಲೇ ಖಾತೆಗೆ ಹಲವಾರು ಜನರು ಫ್ರೆಂಡ್ ಗಳಿದ್ದು ಕೆಲವರು ಇನ್ನು ರಿಕ್ವೆಸ್ಟ್ ಗಳನ್ನ ಕಳಿಸುತ್ತಿದ್ದಾರೆ.ಇನ್ನೂ ಈ ಒಂದು ವಿಚಾರ ಕುರಿತು ನಕಲಿ ಖಾತೆ ತೆರೆದಿರುವುದು ಯಾರು ಎಂದು ತಿಳಿದು ಬಂದಿಲ್ಲ.ಅದು ನಕಲಿ ಖಾತೆ ಎಂದು ಸ್ಪಷ್ಟಪಡಿಸಿರುವ ಎಸ್ಪಿ ಹನುಮಂತರಾಯ ಅವರು ಈ ಖಾತೆ ಮೂಲಕ ಜನರಿಂದ ಹಣ ಹಾಗೂ ಸಹಾಯ ಪಡೆದು ವಂಚನೆ ಸಾಧ್ಯತೆ ಶಂಕೆ ವ್ಯಕ್ತಪಡಿ ಸಿದ್ದಾರೆ.ಕೂಡಲೇ ಎಚ್ಚೆತ್ತ ಎಸ್ಪಿ ಹನುಮಂತರಾಯ ಈ ಖಾತೆ ನಕಲಿ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ ಈ ಖಾತೆಯ ಮೂಲಕ ಯಾರಾದರೂ ಹಣದ ಆಮಿಷಗಳನ್ನ ಒಡ್ಡಿದರೆ ಉತ್ತರಿಸದಂತೆ ಮನವಿ ಮಾಡಿದ್ದು ಇದೀಗ ವಿಷಯ ಗಮನಕ್ಕೆ ಬಂದಿದೆ. ನಕಲಿ ಖಾತೆ ತೆರೆದಿರುವವರ ವಿರುದ್ಧ ನಿರ್ದಾಕ್ಷಿಣ್ಯ ವಾಗಿ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಹನುಮಂತ ರಾಯ ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....