LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬಂಗಾರದ ಆಭರಣ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಮಾಡುತ್ತಿದ್ದ ಆರೋಪಿ ಅಂದರ್

ಹುಬ್ಬಳ್ಳಿ - ಮುಗ್ಧ ಗ್ರಾಹಕರನ್ನು ಮೋಸ ಮಾಡಿ ಅವರಿಂದ 330 ಗ್ರಾಂ ಬಂಗಾರ ಹಾಗೂ 5 ಲಕ್ಷ 11‌ ಸಾವಿರ ನಗದು ಎಗರಿಸಿ ಪರಾರಿಯಾಗಿದ್ದ ಆಸಾಮಿಯನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ವಿದ್ಯಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುನೀಲ. ಮೋಹನ್. ಪತ್ತಾರ ಬಂಧಿತ ಆರೋಪಿಯಾಗಿದ್ದಾನೆ.

ಇತ ಹುಬ್ಬಳ್ಳಿಯ ಅಕ್ಷಯ ಕಾಲನಿಯ, ಚೇತನಾ ಕಾಲೇಜು ಹಿಂದುಗಡೆ ಬೇರೆ ಬೇರೆ ಸಮಯದಲ್ಲಿ‌ ಬಂಗಾರದ ಆಭರಣ ರಿಪೇರಿ ಮಾಡಿಕೊಡುವುದಾಗಿ.ಜೊತೆಗೆ ಹಂತ ಹಂತವಾಗಿ ಹಣ ತುಂಬಿದವರಿಗೆ ಹಾಲ್ ಮಾರ್ಕ್ ಇರುವ ಚಿನ್ನ ನೀಡುವುದಾಗಿ ಗ್ರಾಹಕರನ್ನು ನಂಬಿಸಿ, ಅವರಿಂದ 330 ಗ್ರಾಂ ಆಭರಣ ಹಾಗೂ 5 ಲಕ್ಷ 11 ಸಾವಿರ ನಗದನ್ನು ತಗೆದುಕೊಂಡು ಹೋಗಿದ್ದನು.ಹಾಗಾಗಿ ಮೋಸ ಹೋದ ಗ್ರಾಹಕರು ವಿದ್ಯಾನಗರ ಪೊಲೀಸ ಠಾಣೆಯ ಮೊರೆಹೋಗಿದ್ದರು. ಈಗ ಬಂಧಿತನಿಂದ ವಿದ್ಯಾನಗರ ಪೊಲೀಸರು,

ಗ್ರಾಹಕರಿಂದ ವಂಚನೆ ಮಾಡಿದ 16 ಲಕ್ಷ 44 ಸಾವಿರ ಮೌಲ್ಯದ 330 ಗ್ರಾಂ ಚಿನ್ನ, 3ಲಕ್ಷ 56 ಸಾವಿರ 4 ನೂರ ರೂಪಾಯಿ ನಗದನ್ನು ವಶಕ್ಕೆ ಪಡಸಿಕೊಂಡಿದ್ದಾರೆ. ಈಗ ಆರೋಪಿ ಸುನೀಲ್‌ನನ್ನು ಬಂಧಿಸಿ ಕಂಬಿ ಹಿಂದೆ ವಿದ್ಯಾನಗರ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಹಾಕಿದ್ದಾರೆ. ಇನ್ಸ್ಪೆಕ್ಟರ್ ಆನಂದ ವನಕುದರಿ, ಪೊಲೀಸ್ ಸಿಬ್ಬಂದಿ ಗಳಾದ ಶಿವಾನಂದ ಬನ್ನಿಕೊಪ್ಪ ,ಬಿ ವಿ ವಿಕ್ಕಬಾಸೂರ ,ಬಸವರಾಜ ಕೋಟಬಾಗಿ,ಬಸವರಾಜ ಕಿತ್ತೂರ,ಯಲ್ಲಪ್ಪ ಶಿಂಡ್ಲೆ,ಎಮ್ ಎನ್ ಗುರಮ್ಮನವರ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....